2 ಮತ್ತು 4ನೇ ಶನಿವಾರ ರಜೆ ಪಡೆಯದ ನೌಕರರಿಗೆ ಹಿಂದಿನಂತೆ ರಜೆ ಮುಂದುವರಿಕೆ
ಬಿ.ಎಸ್. ಯಡಿಯೂರಪ್ಪ
ಬೆಂಗಳೂರು, ನ.30 - ರಾಜ್ಯ ಸರ್ಕಾರದ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯಲ್ಲಿ ಪ್ರತಿ ತಿಂಗಳು 2 ಮತ್ತು 4 ನೇ ಶನಿವಾರ ರಜೆ ಪಡೆಯದ ನೌಕರರಿಗೆ ಈ ಹಿಂದೆ ಇದ್ದಂತೆ 15 ಸಾಂದರ್ಭಿಕ ರಜೆ ಹಾಗೂ 2 ಪರಿಮಿತ ರಜೆಗಳನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಹಲವಾರು ವರ್ಷಗಳಿಂದ ತಿಂಗಳ 2ನೇ ಶನಿವಾರ ರಜೆ ನೀಡಲಾಗುತ್ತಿದ್ದು, ಜೂನ್ ತಿಂಗಳ ಆದೇಶದಲ್ಲಿ ಪ್ರತಿ ತಿಂಗಳ 2ನೇ ಹಾಗೂ ನಾಲ್ಕನೇ ಶನಿವಾರ ರಜೆ ಮುಂದುವರಿಸಲು ಸರ್ಕಾರ ಆದೇಶಿಸಿತ್ತು.
ಇದರಿಂದಾಗಿ ಪ್ರಸ್ತುತ ರಜಾ ಸೌಲಭ್ಯಗಳನ್ನು ಪಡೆಯದ ಕೆಲ ಇಲಾಖೆಯ ನೌಕರರಿಗೆ ಸಾಂದರ್ಭಿಕ ರಜೆಗಳು 15 ರಿಂದ ಕಡಿತಗೊಳಿಸಿ 10ಕ್ಕೆ ಮಿತಿಗೊಳಿಸಲಾಗಿತ್ತು. ಇದರಿಂದ ರಜೆ ಪಡೆಯದ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಕಾರ್ಮಿಕರಿಗೆ ಅನಾನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ಸರ್ಕಾರವು ಮನವಿಗೆ ಮಣಿದು ಹಿಂದೆ ಇದ್ದಂತೆ ರಜಾ ದಿನಗಳನ್ನು ಮುಂದುವರಿಸುವಂತೆ ಯಡಿಯೂರಪ್ಪ ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 