ವಿಜಯಪುರ ಮೇ.18: ಪ್ರವಾಹದಿಂದ ಹಾನಿಗೊಳಗಾದ ಪುನರ್ನಿಮರ್ಾಣ ಕಾಮಗಾರಿಗಳು ಸೇರಿದಂತೆ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಲೋಕೊಪಯೋಗಿ ಹಾಗೂ ಸಮಾಜಕಲ್ಯಾಣ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಲೋಕೊಪಯೋಗಿ ಇಲಾಖೆ, ಸಮಾಜಕಲ್ಯಾಣ ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ನೆರೆಹಾವಳಿ ಸಂದರ್ಭದಲ್ಲಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕಾಮಗಾರಿಗಳು, ಚಾಲ್ತಿಯಲ್ಲಿರುವ ಕಾಮಗಾರಿಗಳು ಮತ್ತು ರಾಜ್ಯ ಹೆದ್ದಾರಿ ಅಭಿವೃದ್ದಿ ಕಾರ್ಯಗಳಿಗೆ ವಿಶೇಷ ಆದ್ಯತೆ ನೀಡಿ ಗುಣಮಟ್ಟದ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.
ಅದರಂತೆ ಜಿಲ್ಲೆಯ 8 ವಿಧಾನಸಭಾವಾರು ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಬೇಕು. ನೂತನ ಕಾಮಗಾರಿಗಳ ಟೆಂಡರ್ಗೆ ಸಂಬಂಧಪಟ್ಟಂತೆ ಹಣಕಾಸು ಇಲಾಖೆಯ ಅನುಮತಿಯಿಂದ ಕ್ರಮಕೈಗೊಳ್ಳುವಂತೆ ತಿಳಿಸಿದ ಅವರು ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ವಸತಿ ಶಾಲೆ, ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳುವಂತೆ ತಿಳಿಸಿರುವ ಅವರು ಕೋವಿಡ್-19 ಲಾಕ್ಡೌನ್ ಜಾರಿ ಮತ್ತು ಸಂಕಷ್ಟ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ರಸ್ತೆ ಮತ್ತು ಚರಂಡಿ ಕೆಲಸಗಳನ್ನು ಸಧ್ಯಕ್ಕೆ ಕೈಗೆತ್ತಿಕೊಳ್ಳದಂತೆ ಅವರು ಸೂಚನೆ ನೀಡಿದರು.
ವಿಜಯಪುರ ಮತ್ತು ಹುಬ್ಬಳ್ಳಿ ಹೆದ್ದಾರಿ ನಿಮರ್ಿಸಲಾಗಿದ್ದು, ಇದರಡಿ ಶಿಲ್ಕು ಉಳಿದಿರುವ 40 ಕೋಟಿ ರೂ. ಪುನರ್ಬಳಕೆಗೆ ಸಂಬಂಧಪಟ್ಟಂತೆ ಈಗಾಗಲೇ ಕಳುಹಿಸಲಾಗಿರುವ ಪ್ರಸ್ಥಾವನೆ ಮಂಜೂರಾತಿಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು. ಅದರಂತೆ ವಿಜಯಪುರ-ಕಾರಜೋಳ ಮಧ್ಯದ 21 ಕಿ.ಮಿ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಹೊಂದಲು ಹೆಚ್ಚುವರಿ ರಸ್ತೆ ನಿಮರ್ಾಣಕ್ಕೆ ಸಂಬಂಧಪಟ್ಟಂತೆ ಅನುದಾನ ಬೇಡಿಕೆ, ಪರಿಷ್ಕೃತ ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರರಿಗೆ ಸೂಚಿಸಿದರು.
ಅದರಂತೆ ವಿಜಯಪುರ ನಗರದ ಇಟಗಿ ಪೆಟ್ರೋಲ್ ಪಂಪ್ದಿಂದ ಗೋದಾವರಿ ಹೋಟೆಲ್ವರೆಗೆ ನಿಮರ್ಿಸಬೇಕಾದ ಹೆದ್ದಾರಿ ನಿಮರ್ಾಣಕ್ಕೆ ಸಂಬಂಧಪಟ್ಟಂತೆ ಪ್ರಸ್ಥಾವನೆಗೆ ಅನುಮೋದನೆ ಪಡೆದು ಕಾಮಗಾರಿ ಆರಂಭಕ್ಕೆ ವಿಶೇಷ ಗಮನವನ್ನು ನೀಡುವಂತೆ ತಿಳಿಸಿದ ಅವರು ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳ ವ್ಯಾಪ್ತಿಯಲ್ಲಿ ರಸ್ತೆ ಸುಧಾರಣೆಗೆ ವಿಶೇಷ ಒತ್ತನ್ನು ನೀಡುತ್ತಿದ್ದು, ಕೋವಿಡ್-19 ಸಂಕಷ್ಟ ಪರಿಸ್ಥಿಯಿಂದಾಗಿ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದ್ದು, ಕೋವಿಡ್-19 ಪರಿಸ್ಥಿತಿ ಸುಧಾರಣೆ ಗೊಂಡ ನಂತರ ಆದ್ಯತೆ ಮೇಲೆ ಈ ಕಾಮಗಾರಿಗಳಿಗೆ ಗಮನ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಧಾನ ಸಭಾವಾರು ರಸ್ತೆಗಳ ನಿಮರ್ಾಣ, 5054 ರಾಜ್ಯ ಹೆದ್ದಾರಿ ಸುಧಾರಣೆ, ನವೀಕರಣ, ಎಷಿಯನ್ ಡೆವೆಲಪ್ಮೇಂಟ್ ಬ್ಯಾಂಕ್ ನೆರವಿನ ಕಾಮಗಾರಿಗಳು, ಜಿಲ್ಲಾ ಮುಖ್ಯರಸ್ತೆ ಸೇತುವೆ ಸುಧಾರಣಾ ಕಾಂಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ರಸ್ತೆಯ ಬದಿ ಚರ್ಮಗಾರಿಕೆ(ಚಮ್ಮಾರಿಕೆ) ಮಾಡುವ ಬಡ ಕೂಲಿಗಾರಿಕೆ ಕುಟುಂಬಗಳ ನೆರವಿಗಾಗಿ ಈಗಾಗಲೆ ಕೇಂದ್ರ ಮತ್ತು ರಾಜ್ಯ ಸಕರ್ಾರಗಳ ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಳಕಳಿಯ ಫಲವಾಗಿ ಪ್ರತಿಯೊಬ್ಬರಿಗೆ 5 ಸಾವಿರ ರೂಪಾಯಿಗಳನ್ನು ಆರ್ಟಿಜಿಎಸ್ ಮೂಲಕ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸಮಾಜ ಕಲ್ಯಾಣ ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಮಂಜೂರಾಗಿರುವ ಮತ್ತು ಅವಶ್ಯಕತೆ ಇರುವ ನಿವೇಶನ ಮಾಹಿತಿಯನ್ನು ಸಲ್ಲಿಸಬೇಕು. ಈಗಾಗಲೇ ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯ ಕೋವಿಡ್-19 ಹಿನ್ನಲೆ ಸಾಂಸ್ಥಿಕ ಕ್ವಾರಂಟೈನ್ಗೆ ಬಳಸಲಾಗುತ್ತಿರುವ ವಸತಿ ಶಾಲೆ, ವಸತಿ ನಿಲಯಗಳಲ್ಲಿ ಜನರಿಗೆ ಊಟ, ಉಪಹಾರ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಅದರಂತೆ ಭೂ ಒಡೆತನ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಜಮಿನು ನೀಡುವ ಕುರಿತಂತೆ ಅಂಬೇಡ್ಕರ್ ಅಭಿವೃದ್ದಿ ನಿಗಮದ ಬೆಳಗಾವಿ ಉಪ ಪ್ರಧಾನ ವ್ಯವಸ್ಥಾಪಕರಿಗೆ ಇರುವ ಪ್ರಸ್ಥಾವನೆ ಪರಿಶೀಲಿಸುವ ಅಧಿಕಾರವನ್ನು ಮೊಟಕುಗೊಳಿಸಿ ಜಿಲ್ಲಾಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಅವರು ಸಾರ್ವಜನಿಕರ ಅಹವಾಲು ಆಲಿಸಿದರು. ಬೀದಿ ಬದಿ ಚರ್ಮಗಾರಿಕೆ(ಚಮ್ಮಾರಿಕೆ) ಮಾಡುವ ಬಡ ಕುಟುಂಬಗಳಿಗೆ ಮಂಜೂರಾದ 5000 ರೂಗಳ ಮಂಜೂರಾತಿ ಪತ್ರವನ್ನು ಇಂದು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಲೋಕೋಪಯೋಗಿ ಇಲಾಖೆ ಕಾರ್ಯನಿವರ್ಾಹಕ ಅಭಿಯಂತರ ಬಿ.ಬಿ ಪಾಟೀಲ, ಸಹಾಯಕ ಅಭಿಯಂತರರಾದ ಆರ್.ಕೆ ಮಜುಂದಾರ್, ಆರ್.ಕೆ ಕತ್ತಿ, ಎಸ್.ಎನ್ ಕರೂರ, ಎಂ.ಎಸ್ ನಿಡೋಣಿ, ಜಿ.ಎಸ್ ಪಾಟೀಲ, ಸಮಾಜಕಲ್ಯಾಣ ಇಲಾಖೆ ಉಪನಿದರ್ೇಶಕ ಮಹೇಶ ಪೋತದಾರ ಹಾಗೂ ಇತರರು ಉಪಸ್ಥಿತರಿದ್ದರು.