ಹವಾಮಾನ ಸುಧಾರಣೆ ನಡುವೆಯೂ ಕಾಶ್ಮೀರ ಹೆದ್ದಾರಿಯಲ್ಲಿ ಏಕಮುಖ ಸಂಚಾರ ಮುಂದುವರಿಕೆ
ಶ್ರೀನಗರ, ಫೆ 8, ಹವಾಮಾನ ಪರಿಸ್ಥಿತಿಯಲ್ಲಿ ಹೆಚ್ಚು ಸುಧಾರಣೆಯ ಹೊರತಾಗಿಯೂ, ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ರಸ್ತೆಯಾದ 270 ಕಿ.ಮೀ ಉದ್ದದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಏಕಮುಖ ಸಂಚಾರ ಮುಂದುವರೆದಿದೆ.‘ಶನಿವಾರ ಶ್ರೀನಗರದಿಂದ ಜಮ್ಮು ಕಡೆಗೆ ವಾಹನ ಸಂಚಾರಕ್ಕೆ ಅವಕಾಶವಿರುತ್ತದೆ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಇಂದು ಬೆಳಿಗ್ಗೆ ಯುಎನ್ಐಗೆ ತಿಳಿಸಿದ್ದಾರೆ.ಲಘು ಮೋಟಾರು ವಾಹನಗಳಿಗೆ (ಎಲ್ಎಂವಿ) ಬೆಳಿಗ್ಗೆ ಚಲಿಸಲು ಅವಕಾಶವಿದ್ದರೆ, ಮಧ್ಯಾಹ್ನ ಭಾರೀ ಮೋಟಾರು ವಾಹನಗಳಿಗೆ (ಎಚ್ಎಂವಿ) ಅವಕಾಶ ನೀಡಲಾಗಿದೆ. ಮುಂದಿನ ಆದೇಶದವರೆಗೆ ಹೆದ್ದಾರಿಯಲ್ಲಿ ಏಕಮುಖ ಸಂಚಾರ ಮಾತ್ರ ಮುಂದುವರಿಯಲಿದೆ ಎಂದು ಅವರು ಹೇಳಿದರು.ಏಕಮುಖ ಸಂಚಾರ ಯಶಸ್ವಿಯಾಗಿದೆ ಎಂಬುದು ದೃಢಪಟ್ಟಿದೆ. ಏಕಮುಖ ಸಂಚಾರದಿಂದ ಕಳೆದ ಒಂದು ವಾರಕ್ಕೂ ಹೆಚ್ಚು ಕಾಲ, ವಾಹನ ಸಂಚಾರ ಸಾಮಾನ್ಯವಾಗಿದೆ. ಎರಡೂ ಕಡೆ ಸಂಚಾರಕ್ಕೆ ಅವಕಾಶವಿದ್ದಿದ್ದರೆ ಗಂಟೆಗಳವರೆಗೆ ಭಾರಿ ವಾಹನ ದಟ್ಟಣೆ ಉಂಟಾಗುತ್ತಿತ್ತು.ಈ ಮಧ್ಯೆ, ಲಡಾಖ್ನ ಕೇಂದ್ರಾಡಳಿತ ಪ್ರದೇಶವನ್ನು (ಯುಟಿ) ಕಾಶ್ಮೀರದೊಂದಿಗೆ ಸಂಪರ್ಕಿಸುವ ಏಕೈಕ ರಸ್ತೆಯಾದ 434 ಕಿ.ಮೀ ಉದ್ದದ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಕಳೆದ ಎರಡು ತಿಂಗಳಿನಿಂದ ಮುಚ್ಚಲ್ಪಟ್ಟಿದೆ. ಹೆದ್ದಾರಿಯಲ್ಲಿ 6 ಅಡಿಗಳಿಂದ 12 ಅಡಿಗಳಿಗಿಂತ ಹೆಚ್ಚು ಹಿಮ ತುಂಬಿದೆ. ಜೊಜಿಲಾ ಪಾಸ್ ಪ್ರದೇಶ ಹಿಮದಿಂದ ಹೆಪ್ಪುಗಟ್ಟಿದೆ. ಹಾಗೆಯೇ, ದಕ್ಷಿಣ ಕಾಶ್ಮೀರದ ಶೋಪಿಯಾನ್ ಅನ್ನು ರಾಜೌರಿ ಮತ್ತು ಪೂಂಚ್ ಮತ್ತು ಅನಂತ್ ನಾಗ-ಕಿಶ್ತ್ ವಾರ್ ರಸ್ತೆಯೊಂದಿಗೆ ಸಂಪರ್ಕಿಸುವ ಐತಿಹಾಸಿಕ 86 ಕಿ.ಮೀ ಉದ್ದದ ಮೊಘಲ್ ರಸ್ತೆ ಕಳೆದ ಎರಡು ತಿಂಗಳಿನಿಂದ ಹಿಮ ಬಿದ್ದಿರುವುದರಿಂದ ಮುಚ್ಚಲ್ಪಟ್ಟಿದೆ. ಈ ರಸ್ತೆ ಮಾರ್ಚ್-ಏಪ್ರಿಲ್ ನಲ್ಲಿ ಮತ್ತೆ ತೆರೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 