ಕರೋನ: ದೇಶದಲ್ಲಿ ಈವರೆಗೆ 934 ಜನರ ಸಾವು, 6868 ರೋಗಿಗಳು ಗುಣಮುಖ
ನವದೆಹಲಿ ಏ 28, ದೇಶದ್ಯಾಂತ ಕರೊನ ಸೋಂಕಿಗೆ ಇದುವರೆಗೆ ಬಲಿಯಾದವ ಸಂಖ್ಯೆ ಸಂಖ್ಯೆ 934ಕ್ಕೆಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ಮಾಹಿತಿ ಬಿಡುಗಡೆ ಮಾಡಿದೆ. ಲಾಕ್ ಡೌನ್ ನಂತಹ . ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಈ ನಡುವೆ ಕಳೆದ 24 ಗಂಟೆಗಳ ಅವಧಿಯಲ್ಲಿ 62 ಜನರು ಕೊರೊನಾಗೆ ಬಲಿಯಾಗಿದ್ದು ದೇಶದಲ್ಲಿ ಮಹಾಮಾರಿ ಕೊರೊನಾಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 934ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1543 ಮಂದಿಯಲ್ಲಿ ಮಾರಕ ಸೋಂಕು ದೃಡಪಟ್ಟಿದೆ. ದೇಶದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 29,435ಕ್ಕೆ ಏರಿಕೆಯಾಗಿದೆ. ಈ ಪೈಕಿ 21,632 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 6868 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡಗುಗಡೆಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 