ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ
ಕಲಬುರಗಿ, ಮೇ 23, ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಓರ್ವ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ.ಆಶಾ ಕಾರ್ಯಕರ್ತೆ ರೇಣುಕಾ ಕುಡಕಿ ಮೇಲೆ ಸೋಮನಾಥ್ ಕಾಂಬಳೆ ಎಂಬುವವರು ಹಲ್ಲೆ ಮಾಡಿ ಕೈ ಮುರಿದಿದ್ದಾರೆ.ಮಹಾರಾಷ್ಟ್ರದ ಮುಂಬೈನಿಂದ ವಾಪಸ್ಸಾಗಿದ್ದ ಸೋಮನಾಥ್ ಅವರನ್ನು ರೇಣುಕಾ, ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸಿದ್ದರು. ಕ್ವಾರಂಟೈನ್ ಕೇಂದ್ರದಲ್ಲಿದ್ದ ಆತ ಊಟಕ್ಕೆ ಚಿಕನ್ ಹಾಗೂ ಮಕ್ಕಳಿಗೆ ಚಿಪ್ಸ್ ಬೇಕು ಎಂದು ಬೇಡಿಕೆ ಇಟ್ಟಿದ್ದನು. ಈ ವೇಳೆ ಆಶಾ ಕಾರ್ಯಕರ್ತೆ ರೇಣುಕಾ ಅವರು ಆಹಾರ ಸರಬರಾಜು ನನ್ನಿಂದ ಆಗುವುದಿಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಸೋಮನಾಥ್, ರೇಣುಕಾ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ರೇಣುಕಾ ಅವರ ಕೈ ಮುರಿದಿದ್ದು, ಆಳಂದ ಪಟ್ಟಣದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೋಮನಾಥ್ ಹೆಂಡತಿ ಸೇರಿ ಕುಟುಂಬದ ಐವರು ಸದಸ್ಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 