ಬೆಂಗಳೂರಿನ 9 ಕಾರ್ಮಿಕರಿಗೆ ಕೊರೋನಾ ಸೋಂಕು, ಹೆಚ್ಚಿದ ಭೀತಿ, ಸೋಂಕಿತರರ ಸಂಖ್ಯೆ 443ಕ್ಕೇರಿಕೆ
ಬೆಂಗಳೂರು, ಏ 23,ಬೆಂಗಳೂರಿನ ಹೊಂಗಸಂದ್ರದ 9 ಕಾರ್ಮಿಕರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.ನಗರದ 30, 30, 22, 40,30,25,37,43 ಹಾಗೂ 24 ವರ್ಷದ ವ್ಯಕ್ತಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇವರು ಕೊಳಚೆ ಪ್ರದೇಶದ ನಿವಾಸಿಗಳಾಗಿದ್ದು, ಇದರಿಂದ ಇನ್ನಷ್ಟು ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿಕೆಯಾಗಿದೆ. 17 ಜನರು ಸೋಂಕಿನಿಂದ ಮೃತಪಟ್ಟಿದ್ದು, 141 ಜನರು ಗುಣಮುಖರಾಗಿದ್ದಾರೆ.ವಿಜಯಪುರದಲ್ಲಿ ಮತ್ತೆ ಎರಡು ಪ್ರಕರಣ ಪತ್ತೆಯಾಗಿದೆ. 32 ವರ್ಷದ ಪುರುಷ ಮತ್ತು 25 ವರ್ಷದ ಯುವತಿ, ಹುಬ್ಬಳ್ಳಿ, ಧಾರವಾಡದ 30 ವರ್ಷದ ಮಹಿಳೆ, 13 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 78 ವರ್ಷದ ವೃದ್ಧೆ, ಮಂಡ್ಯದ 47 ಹಾಗೂ 28 ವರ್ಷದ ಯುವತಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 