ಬಳ್ಳಾರಿಯಲ್ಲಿ ಕೊರೋನಾ ಅಟ್ಟಹಾಸ: ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ - ತೀವ್ರ ಕಟ್ಟೆಚ್ಚರ
ಬಳ್ಳಾರಿ, ಏ 17,ಗಡಿ ನಾಡು ಬಳ್ಳಾರಿಯಲ್ಲಿ ಕೊರೋನಾ ವೈರಸ್ ಅಟ್ಟಹಾಸ ತೀವ್ರಗೊಂಡಿದ್ದು, ಗಣಿ ನಾಡನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಳ್ಳಾರಿಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6ರಲ್ಲೇ ನಿಯಂತ್ರಣದಲ್ಲಿತ್ತು. ಇಂದು ಒಂದೇ ಕುಟುಂಬದ ಏಳು ಜನರಲ್ಲಿ ಕೊರೋನಾ ಸೋಂಕು ಕಂಡು ಬಂದಿರುವುದು ತೀವ್ರ ಆತಂಕ ಮೂಡಿಸಿದೆ. ಹೀಗಾಗಿ ತೀವ್ರ ನಿಗಾ ವಹಿಸಲಾಗಿದೆ. ಹೊಸಪೇಟೆ ನಗರದ ಒಂದೇ ಕಟುಂಬದ ಏಳು ಜನರಲ್ಲಿ ಈ ಸೋಂಕು ಕಂಡು ಬಂದಿರುವುದರಿಂದ ಈಗ ಹೊಸಪೇಟೆ ನಗರ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ.ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ಹೊಸ ಪ್ರಕರಣಗಳು ವರದಿಯಾಗಿರಲಿಲ್ಲ. ಜತೆಗೆ ಲಾಕ್ಡೌನ್ ಸಮಯದಲ್ಲಿ ಜನತೆ ಮನೆಯಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಸೋಂಕು ಹರಡಂದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಜನತೆ ಉತ್ತಮ ಸಹಕಾರ ನೀಡಿದ್ದರು. ಮಾರ್ಚ್ 30 ರಂದು ಹೊಸಪೇಟೆಯ ಎಸ್.ಆರ್. ನಗರದ ಗಂಡ ,ಹೆಂಡತಿ, ಮಗಳಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ಇವರು ಯಾರು ವಿದೇಶದಿಂದ ಬಂದವರ ಸಂಪರ್ಕದಲ್ಲಿದ್ದರು. ಇದೀಗ ಹೊಸದಾಗಿ ಸೋಂಕು ಪತ್ತೆಯಾದವರನ್ನು ಕ್ವಾರೆಂಟೇನ್ ನಲ್ಲಿಟ್ಟು ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 