ಕೊರೊನಾ ಭೀತಿ ಹಿನ್ನೆಲೆ ರೈಲ್ವೆ ಟಿಕೆಟ್ ರದ್ದತಿಗೆ ಪೂರ್ತಿ ಹಣ ವಾಪಸ್: ಸರ್ಕಾರ
ನವದೆಹಲಿ, ಮಾ.19 ಕೊರೊನಾ ವೈರಸ್ ಭೀತಿ ಹಿನ್ನೆಲೆ ರೈಲು ಪ್ರಯಾಣಿಕರು ಟಿಕೆಟ್ ರದ್ದು ಪಡಿಸಿದರೆ, ಯಾವುದೇ ಶುಲ್ಕ ವಿಧಿಸದೆ ಪ್ರತಿಷತ ನೂರಕ್ಕೆ ನೂರುರಷ್ಟು ಹಣವನ್ನು ಹಿಂದಿರುಗಿಸುವ ಬಗ್ಗೆ ಗುರುವಾರ ಸರ್ಕಾರ ಪ್ರಕಟಿಸಿದೆ. ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಈಗಾಗಲೇ ಸುತ್ತೋಲೆ ಹೊರಡಿಸಲಾಗಿದ್ದು, ರೈಲು ಟಿಕೆಟ್ ರದ್ದು ಮಾಡಿದ ಪ್ರಯಾಣಿಕರು ಪೂರ್ತಿ ಹಣವನ್ನು ವಾಪಸ್ ನೀಡುವುದಾಗಿ” ತಿಳಿಸಿದ್ದಾರೆ. ರೈಲ್ವೆ ಸಾರಿಗೆ ಇಲಾಖೆ ಈ ಕುರಿತ ಸಂಸದೀಯ ಸ್ಥಾಯಿ ಸಮಿತಿಗೆ ಮಾಹಿತಿ ನೀಡಿದೆ. ಕೊರೊನಾ ವೈರಸ್ ಭೀತಿಯಿಂದ ಬುಧವಾರ ಶೇಕಡಾ 63 ರಷ್ಟು ಟಿಕೆಟ್ ಗಳು ರದ್ದಾಗಿವೆ ಎಂದು ಪ್ರವಾಸೋದ್ಯ ಮತ್ತ ಸಂಸ್ಕೃತಿ ಇಲಾಖೆ ತಿಳಿಸಿದೆ. ಅವಶ್ಯಕತೆ ಇದ್ದರೆ ಮಾತ್ರ ಪ್ರಯಾಣಿಸಿ ಎಂದು ದೇಶದ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ. ಅಲ್ಲದೆ ಕೋವಿಡ್-19 ಬಗ್ಗೆ ಸಂಸದರು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಬಗ್ಗೆ ವಿಶೇಷವಾಗಿ ಗಮನ ಹರಿಸಲಾಯಿತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 