ಕೊರೋನಾ ವೈರಸ್: ಭಾರತೀಯ ವೈದ್ಯಕೀಯ ಸಂಘದಿಂದ ಜನ ಜಾಗೃತಿ
ಬೆಂಗಳೂರು, ಮಾ 19, ರಾಜ್ಯದಲ್ಲಿ ಮಹಾಮಾರಿಯಾಗಿ ಪರಿಣಮಿಸಿರುವ ಕೊರೋನಾ ವೈರಸ್ ನಿಯಂತ್ರಣ ಕುರಿತ ಜನ ಜಾಗೃತಿ ಮೂಡಿಸಲು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕ ಕಾರ್ಯ ಪ್ರವೃತ್ತವಾಗಿದೆ.ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಭಾರತೀಯ ವೈದ್ಯಕೀಯ ಸಂಘ ಜನಜಾಗೃತಿ ಆರಂಭಿಸಿದೆ.
ಸಂಘದ ರಾಜ್ಯಾಧ್ಯಕ್ಷ ಡಾ.ಮಧುಸೂಧನ ಕಾರಿಗನೂರು ಈ ಕುರಿತು ಮಾಹಿತಿ ನೀಡಿ, " ನಮ್ಮ ಸಂಘದ 179 ಶಾಖೆಗಳ ಮೂಲಕ ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕರಪತ್ರ, ಬ್ಯಾನರ್ ಹಂಚುವ ಜತೆಗೆ ವೈರಸ್ ನಿಂದಾಗುವ ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಲಾಗುತ್ತಿದೆ" ಎಂದರು.
ಕೆಮ್ಮು, ಜ್ವರ, ನೆಗಡಿ ಇರುವವರು ಆಸ್ಪತ್ರೆಗಳಿಗೆ ಬಂದರೆ ಪ್ರತ್ಯೇಕ ವಾರ್ಡಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ತಮಗೆ ಆಹ್ವಾನ ಸಂತೋಷದಿಂದ ತೆರಳುವುದಾಗಿ ಹೇಳಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 