ಬೆಂಗಳೂರಿನ ಹೊಂಗಸಂದ್ರ ಬಿಬಿಎಂಪಿ ಕಾರ್ಮಿಕರಿಗೆ ಕೊರೊನಾ ಸೋಂಕು ದೃಢ- ಸೀಲ್ ಡೌನ್
ಬೆಂಗಳೂರು, ಏಪ್ರಿಲ್ 23,ಬೆಂಗಳೂರಿನ ಹೊಂಗಸಂದ್ರ ಬಡಾವಣೆಯಲ್ಲಿ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು 188 ಜನರನ್ನು ಕ್ವಾರೇಂಟೇನ್ನಲ್ಲಿಡಲಾಗಿದೆ. ಹೊಂಗಸಂದ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು ನಿನ್ನೆ ರಾತ್ರಿಯಿಂದ ಬಿಬಿಎಂಪಿ ಆಪರೇಷನ್ ಕ್ವಾರಂಟೈನ್ಗೆ ಚಾಲನೆ ನೀಡಿದೆ. ಬೊಮ್ಮನಹಳ್ಳಿ ಹೊಂಗಸಂದ್ರ ಮತ್ತು ಜ್ಯೋತಿ ನಗರದಲ್ಲಿ ನಿನ್ನೆ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 2:25ರ ವರೆಗೂ ಕಾರ್ಯಾಚರಣೆ ನಡೆಸಿದೆ.
ಪ್ರಸ್ತುತ ಕ್ವಾರಂಟೈನ್ಗೆ ಒಳಗಾಗಿರುವ ಎಲ್ಲರೂ ಬಿಬಿಎಂಪಿ ಕೂಲಿ ಕಾರ್ಮಿಕರೇ ಆಗಿದ್ದು ಇವರಿಗೆ ಪ್ರತಿದಿನ ಅನೇಕ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳು ಉಚಿತ ಆಹಾರ, ದಿನಸಿ ವಿತರಣೆ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.ಕೊರೊನಾ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರ ಪಟ್ಟಿ ಬಿಡುಗಡೆ ಮಾಡಿದ್ದು ಸಂಪರ್ಕಿತರ ಪಟ್ಟಿಯಲ್ಲಿ 24 ಪ್ರಾಥಮಿಕ ಮತ್ತು 164 ದ್ವಿತೀಯ ಹಂತದ ಸಂಪರ್ಕ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಆತಂಕಕ್ಕೀಡು ಮಾಡಿದೆ.ಹೀಗಾಗಿ ಒಟ್ಟು 188 ಜನರನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ.ಅಪಾಯದ ಹಂತ ಅಂದುಕೊಂಡದ್ದಕ್ಕಿಂತ ಹೆಚ್ಚಾಗುವ ಆತಂಕದಿಂದಾಗಿ ಹೊಂಗಸಂದ್ರ ವಾರ್ಡ್ ನ ವಿದ್ಯಾ ಜ್ಯೋತಿ ಬಡಾವಣೆಯನ್ನು ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದೆ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 