ದೇಶ ಭಯದಲ್ಲಿ ಬದುಕುತ್ತಿದೆ: ಆನಂದ್ ಶರ್ಮಾ
ನವದೆಹಲಿ, ಫೆ 6 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದ ಮತ್ತು ಪ್ರಸ್ತಾವಿತ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಕಾಯ್ದೆಯಿಂದ ದೇಶದಲ್ಲಿ ಭಯದ ವಾತಾವರಣ ಉಂಟಾಗಿದ್ದು, ಯುವಜನತೆ ಭವಿಷ್ಯದ ಕುರಿತು ಆತಂಕಕ್ಕೊಳಗಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ಅವರು, ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸಿದವರಿಗೆ ದೇಶದ್ರೋಹದ ಹಣೆಪಟ್ಟಿ ಕಟ್ಟಲಾಗುತ್ತಿದೆ. ಇದು ಸ್ವೀಕಾರಾರ್ಹವಲ್ಲ, ನೀವು ದೇಶದ ಜನರ ಹಕ್ಕುಗಳನ್ನು ಕಿತ್ತುಕೊಳ್ಳಲಾಗದು. ಜನರ ಮೇಲೆ ದೌರ್ಜನ್ಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಸಿಎಎ ವಿರುದ್ಧ ಹೋರಾಟ ನಡೆಸಿದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ವಿಷಾದನೀಯ ಎಂದ ಅವರು, ಮೋದಿ ಸರ್ಕಾರ ಜಾಗತಿಕ ಗುರು ಆಗುವ ಬದಲು ಅಂತರ್ಜಾಲ ಕಡಿತಗೊಳಿಸುವಲ್ಲಿ ಜಾಗತಿಕ ಗುರುವಾಗಿದೆ ಎಂದು ಆರೋಪಿಸಿದರು.
ದೇಶದಲ್ಲಿ ಯಾವ ರೀತಿಯ ಜನಾದೇಶವಿದೆ? ನಮಗೆ ನೆನಪಿರುವ ನಿಜವಾದ ಜನಾದೇಶವೆಂದರೆ 2014ಕ್ಕೂ ಮುಂಚಿನದ್ದು. ಆದರೆ, ಈ ಜನಾದೇಶಕ್ಕೆ ಪ್ರಧಾನಿ ಮನ್ನಣೆ ನೀಡುತ್ತಿಲ್ಲ ಎಂದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 