ಸಜ್ಜನ್ ಕುಮಾರ್ ಜಾಮೀನು : ತ್ವರಿತ ವಿಚಾರಣೆಗೆ ಕೋರ್ಟ್ ಸಮ್ಮತಿ
ನವದೆಹಲಿ, ನ 4: ಸಿಖ್ ವಿರೋಧಿ ಗಲಭೆಗೆ ಸಂಬಂದಪಟ್ಟಂತೆ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ದೆಹಲಿ ಹೈಕೋರ್ಟ್ 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಇತ್ತೀಚೆಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಸದ್ಯ ಅವರು ಸೆರೆವಾಸದಲ್ಲಿದ್ದಾರೆ.ಈ ಸಂಬಂಧ ಹಿರಿಯ ನ್ಯಾಯವಾದಿ ಶೇಖರ್ ನಫಾಡೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಪರಿಶೀಲಿಸಿ, ತ್ವರಿತ ವಿಚಾರಣೆಗೆ ಸಹಮತ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮೊದಲು ಸಜ್ಜನ್ ಕುಮಾರ್ ಅವರು ದೆಹಲಿ ಹೈಕೋರ್ಟ್ ತೀರ್ಪುನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ, ಇದರ ವಿಚಾರಣೆ ಬಾಕಿ ಇರುವ ಕಾರಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆ ನಡೆದ ಬೆನ್ನಲ್ಲೇ ದೆಹಲಿಯ ಕೆಲವು ಪ್ರದೇಶಗಳಲ್ಲಿ ಸಿಖ್ ವಿರೋಧಿ ಗಲಭೆ ನಡೆದಿದ್ದು ನೂರಾರು ಅಮಾಯಕರನ್ನು ಕೊಂದು ಹಾಕಲಾಗಿತ್ತು, ಇದಕ್ಕೆ ಕುಮ್ಮಕ್ಕು ನೀಡಿದ ಗುರುತರ ಆರೋಪ ಸಜ್ಜನ್ ಕುಮಾರ್ ಮೇಲಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 