ಕೋವಿಡ್ -೧೯; ದೇಶದಲ್ಲಿ ಸಕ್ರಿಯ ಪ್ರಕರಣಗಳಿಗಿಂತ ಚೇತರಿಸಿಕೊಂಡವರ ಪ್ರಮಾಣವೇ ಹೆಚ್ಚು
ನವದೆಹಲಿ, ಜೂನ್ ೧೦, ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ಐದು ಸಾವಿರದ ೯೯೧ ಮಂದಿ ಕೊರೊನಾ ಸೋಂಕಿತರು ಗುಣಮುಖ ಹೊಂದಿದ್ದು, ಈವರೆಗೆ ಒಟ್ಟು ಚೇತರಿಕೆ ಹೊಂದಿದವರ ಸಂಖ್ಯೆ ೧ ಲಕ್ಷದ ೩೫ ಸಾವಿರದ ೨೦೬ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿನಿಂದ ಚೇತರಿಕೆಹೊಂದುತ್ತಿರುವವರ ಪ್ರಮಾಣ ೪೮.೮೮ಕ್ಕೆ ತಲುಪಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೧ ಲಕ್ಷದ ೩೩,೬೩೨ರಷ್ಟಿದ್ದು, ಇದೇ ಮೊದಲ ಬಾರಿಗೆ ಕೊರೊನಾ ಸಕ್ರಿಯ ಪ್ರಕರಣಗಳಿಗಿಂತಲೂ ಚೇತರಿಕೆ ಹೊಂದಿದವರ ಪ್ರಮಾಣವೇ ಹೆಚ್ಚಾಗಿದೆ.ಕಳೆದ ೨೪ ಗಂಟೆಗಳಲ್ಲಿ ೯,೯೮೫ ಹೊಸ ಪ್ರಕರಣಗಳು ಪತ್ತೆಯಾಗಿದ್ದು. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕು ದೃಢ ಪ್ರಕರಣಗಳ ಸಂಖ್ಯೆ ೨ ಲಕ್ಷದ ೭೬, ೫೮೩ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಸಚಿವಾಲಯ ಹೇಳಿದೆ.
ಕಳೆದ ೨೪ ಗಂಟೆಗಳಲ್ಲಿ ೨೭೯ ಮಂದಿ ಮೃತಪಟ್ಟಿದ್ದು, ದೇಶಾದ್ಯಂತ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ೭,೭೪೫ಕ್ಕೆ ತಲುಪಿದೆ. ದೇಶದಲ್ಲಿ ಸೋಂಕಿನಿಂದ ಸಾವನ್ನಪ್ಪುತ್ತಿರುವರ ಪ್ರಮಾಣ ಶೇ ೨.೮೦ರಷ್ಟಿದೆ. ಈ ನಡುವೆ ಕಳೆದ ೨೪ ಗಂಟೆಗಳಲ್ಲಿ ೧ ಲಕ್ಷದ ೪೫ ಸಾವಿರದ ೨೧೬ ಕೊರೊನಾ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ದೇಶದಲ್ಲಿ ಪರೀಕ್ಷೆಗಳ ಸಂಖ್ಯೆ ೫೦ ಲಕ್ಷದ ೬೧ ಸಾವಿರದ ೩೩೨ಕ್ಕೆ ತಲುಪಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ- ಐಸಿಎಂಆರ್ ಹೇಳಿದೆ.ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳಿಗೆ ಕೋವಿಡ್ -೧೯ ಪರೀಕ್ಷೆ ನಡೆಸಲು ಅನುಮತಿ ಕಲ್ಪಿಸುವ ಮೂಲಕ ಪರೀಕ್ಷಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ. ಪ್ರಸ್ತುತ ದೇಶದ್ಯಾಂತ ೮೨೩ ಪ್ರಯೋಗಾಲಯಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ೫೯೦ ಸರ್ಕಾರಿ ಪ್ರಯೋಗಾಲಯಗಳು, ೨೨೩ ಖಾಸಗಿ ಪ್ರಯೋಗಾಲಯಗಳು ಸೇರಿವೆ ಎಂದು ಐಸಿಎಂ ಆರ್ ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 