ಜ್ಞಾನವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮ
Creative program at the Knowledge Center
ಯರಗಟ್ಟಿ 20 : ಸಮೀಪದ ರೈನಾಪೂರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೃಜನಾತ್ಮಕ ಕಾರ್ಯಕ್ರಮವು ರೈನಾಪೂರ ಕಾರ್ಯಕ್ಷೇತ್ರದ ವಾತ್ಸಲ್ಯ ಜ್ಞಾನವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದ ಸಮಾರೋಪ ಸಮಾರಂಭ ಜರುಗಿತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಯೋಜನಾಧಿಕಾರಿ ನಿರ್ದೇಶಕರಾದ ಎಚ್. ಆರ್. ರವಿಕುಮಾರ ಮಾತನಾಡಿದ ನಮ್ಮ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದ ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಒಂದು ತಿಂಗಳ ಕಾಲ ಸೃಜನಶೀಲ ಕಾರ್ಯಕ್ರಮದ ಅಡಿಯಲ್ಲಿ ವೈಯರ ಬಾಸ್ಕೇಟ್, ಉಲ್ಲನನಿಂದ ತೋರಣ ಹಾಗೂ ವಿವಿಧ ಕೌಶಲಗಳ ತರಬೇತಿ ನೀಡಲಾಯಿತು ಎಂದು ಹೇಳಿದರು.
ಶ್ರದ್ದಾನಂದ ಆಶ್ರಮದ ಮಾತೋಶ್ರೀ ಉದ್ದಮ್ಮತಾಯಿ ಮಾತನಾಡಿ ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ, ಗ್ರಾಮೀಣ ಅಭಿವೃದ್ಧಿ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಮಹಿಳೆಯರ ಸ್ವಾವಲಂಬನೆ ಮತ್ತು ಸಮುದಾಯದ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವುದೇ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು. ಈ ವೇಳೆ ಜೆ. ರತ್ನಾಕರ ಶೆಟ್ಟಿ, ತಾಲೂಕಾ ಯೋಜನಾಧಿಕಾರಿ ಶ್ರೀಕಾಂತ ಎಮ್. ರೈತ ಮುಖಂಡ ವೆಂಕಣ್ಣಾ ಹುರಕನವರ, ಸುವರ್ಣಾ ಹಿರೇಮಠ, ಮಂಜುಳಾ ಕುಂಬಾರಗೇರಿಮಠ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶಾ ಮೋಹನ ನಾಯ್ಕ, ಸೇವಾ ಪ್ರತಿನಿಧಿ ಗೀತಾ ಹುಟ್ಟಿ ಸೇರಿದಂತೆ ಅನೇಕರು ಮಹಿಳೆಯರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 