ಮುಂಬೈ ಪೊಲೀಸರಿಗೆ ಕ್ರಿಕೆಟಿಗ ರೋಹಿತ್ ನುಡಿ ನಮನ
ಮುಂಬೈ, ಏ 12,ಇಡೀ ದೇಶ ಕೊರೊನಾ ವೈರಸ್ ಸೋಂಕಿನ ಬಿಕ್ಕಟ್ಟಿನಲ್ಲಿರುವ ಈ ಹೊತ್ತಿನಲ್ಲಿ ಜನರನ್ನು ಸುರಕ್ಷಿತಗೊಳಿಸಲು ಮುಂಬೈ ಪೊಲೀಸರು ನಡೆಸುತ್ತಿರುವ ಪ್ರಯತ್ನವನ್ನು ಭಾರತ ಕ್ರಿಕೆಟ್ ತಂಡದ ಸದಸ್ಯ ರೋಹಿತ್ ಶರ್ಮ ಶ್ಲಾಘಿಸುವ ಮೂಲಕ ನುಡಿ ನಮನ ಸಲ್ಲಿಸಿದ್ದಾರೆ.ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡಿರುವ ಅವರು, "ಗಡಿಯಾರದ 24 ಗಂಟೆಯೂ ಕೆಲಸ ಮಾಡಲು ಮತ್ತು ಮುಂಬೈನ ಪ್ರತಿಯೊಂದು ಭಾಗವನ್ನು ಆವರಿಸಿದೆ ಎಂದು ಖಚಿತಪಡಿಸಿಕೊಳ್ಳಲು ಮುಂಬೈ ಪೊಲೀಸರಿಗೆ ದೊಡ್ಡ ಚಪ್ಪಾಳೆ ಹಾಕೋಣ. ನಮ್ಮಿಂದಾಗುವ ಅಲ್ಪ ಸಹಾಯ ಮಾಡುವ ಮೂಲಕ ಅವರಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದೆ. ಹೀಗಾಗಿ ಎಲ್ಲರೂ ಮನೆಯಲ್ಲಿ ಉಳಿಯಿರಿ," ಎಂದಿದ್ದಾರೆಮಹಾರಾಷ್ಟ್ರದಲ್ಲಿ ಈವರೆಗೆ 1761 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, 208 ರೋಗಿಗಳು ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 127 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸಂಗ್ರಹಿಸಿದ ಅಂಕಿ ಅಂಶಗಳು ತಿಳಿಸಿವೆ.ದೇಶದಲ್ಲಿಕೋವಿಡ್-19 ಪ್ರಕರಣಗಳ ಸಂಖ್ಯೆ ಭಾನುವಾರ 8356ಕ್ಕೆ ಏರಿದೆ. ಈ ಪೈಕಿ 716 ಗುಣಮುಖರಾಗಿ ಬಿಡುಗಡೆಯಾಗಿದ್ದು, 273 ಮಂದಿ ವೈರಸ್ಗೆ ತುತ್ತಾಗಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 