ವ್ಯಕ್ತಿಯೊರ್ವನಿಗೆ ಚಾಕು ಇರಿದು, ಮೈಮೇಲೆ ಪೆಟ್ರೋಲ್ ಸುರಿದು ಕೊಲೆ
Crime News-Jamakhandi
ಲೋಕದರ್ಶನ ವರದಿ
ಜಮಖಂಡಿ 21: ತಾಲ್ಲೂಕಿನ ಕನ್ನೊಳಿ ಗ್ರಾಮದ ಬಸ್ ನಿಲ್ದಾಣದ ನಡುರಸ್ತೆಯಲ್ಲಿ ವ್ಯಕ್ತಿಯೊರ್ವನಿಗೆ ಚಾಕುವಿನಿಂದ ಇರಿದು. ಮೈಮೇಲೆ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿ ಸೋಮಲಿಂಗ ಪಡಸಲಗಿ (36) ಸ್ವೀಪ್ಟ್ ಡಿಜೆರ್ ಹೊಸ ಕಾರು ತೆಗೆದುಕೊಂಡು ಪೂಜೆ ಮುಗಿಸಿ. ಮರಳಿ ಕನ್ನೋಳಿ ಗ್ರಾಮದ ಬಸ್ ನಿಲ್ದಾಣದ ನಡುರಸ್ತೆಯಲ್ಲಿ ನಿಂತುಕೊಂಡ ಸಮಯದಲ್ಲಿ ಆರೋಪಿಗಳಾದ ಸದಾಶಿವ ಪಡಸಲಗಿ ಹಾಗೂ ರವಿ ಪಾಟೀಲ ಮತ್ತು ನಾವಿ ಎಂಬ ಮೂವರು ಸೇರಿಕೊಂಡು ಸೋಮಲಿಂಗ ಪಡಸಲಗಿ ಆತನಿಗೆ ಚಾಕುವಿನಿಂದ ಇರಿದು. ನಂತರ ಪೆಟ್ರೋಲ್ ಮೈಮೇಲೆ ಸುರಿದು ಹಾಗೂ ಸ್ವೀಪ್ ಡಿಜೇರ್ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಯನ್ನು ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯ ಸೋಮಲಿಂಗ ಪಡಸಲಗಿ ಇತನು ಕೊಲೆಗೈದ ಆರೋಪಿ ಹೆಂಡತಿಯ ಜೊತೆ ಅನೈತಿಕ ಸಂಬಂಧ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಹಳೆಯ ವೈಷಮ್ಯ ಕಾರಣದಿಂದ ಕೊಲೆ ನಡೆದಿದ್ದು. ಕೊಲೆ ನಡೆದ ಸ್ಥಳದಲ್ಲಿಯೇ ಮೂವರು ಆರೋಪಗಳನ್ನು ವಶಕ್ಕೆ ಪಡೆಯಲಾಗಿದ್ದು. ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಎಸ್.ಪಿ.ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಮಾಹಿತಿಯನ್ನು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಎಸ್ಪಿ. ಸೈಯದ್ ರೋಷನ್ ಜಮೀರ, ಸಿಪಿಐ ಮಲ್ಲಪ್ಪ ಮಡ್ಡಿ, ಸಾವಳಗಿ ಪಿಎಸ್ಐ. ಅಪ್ಪಣ್ಣ ಐಗಳಿ, ಜಮಖಂಡಿ ಪಿಎಸ್ಐ ಅನೀಲ ಕುಂಬಾರ ತಂಡ ಸೇರಿದಂತೆ ತನಿಖೆಯನ್ನು ಮುಂದುವರಿಸಿದ್ದಾರೆ.

ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 