ಅಕ್ರಮವಾಗಿ ಜಿಲ್ಲೆ ಪ್ರವೇಶಿಸಿದರೇ ಕ್ರಿಮಿನಲ್ ಮೊಕದ್ದಮೆ: ಡಾ.ಬೊಮ್ಮನಹಳ್ಳಿ ಎಚ್ಚರಿಕೆ
ಬೆಳಗಾವಿ, ಮೇ14,ಕೇಂದ್ರ ಸರ್ಕಾರ ಆರಂಭಿಸಿರುವ 'ಸೇವಾಸಿಂಧು' ಆ್ಯಪ್ ಮೂಲಕ ಇ-ಪಾಸ್ ಪಡೆಯದೇ ನೆರೆ ರಾಜ್ಯಗಳಿಂದ ಕಾನೂನುಬಾಹಿರವಾಗಿ ಜಿಲ್ಲೆ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.ಸರ್ಕಾರದ ಮಾರ್ಗಸೂಚಿ ಅನುಸರಿಸದೇ ಕೆಲವರು ಅಡ್ಡದಾರಿಯಿಂದ ಜಿಲ್ಲೆಗೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ.ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿದ್ದು, ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿ ಇತರೆ ನೆರೆ ರಾಜ್ಯಗಳ ಮೂಲಕ ಯಾರಾದರೂ ಬೆಳಗಾವಿ ಜಿಲ್ಲೆ ಪ್ರವೇಶಿಸಿದ್ದರೆ ಅಂತಹವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಜತೆಗೆ, ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು. ಒಂದು ವೇಳೆ ಅಕ್ರಮ ಪ್ರವೇಶದ ವಿಷಯ ಮುಚ್ಚಿಟ್ಟಿರುವುದು ತಿಳಿದುಬಂದರೆ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇಂತಹವರ ವಿರುದ್ಧ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ ಸಂಖ್ಯೆ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 