ಹಲಿಮನವರ ಬಾವಿಯಲ್ಲಿ ಮೊಸಳೆ ಪ್ರತ್ಯಕ್ಷ ರೈತರಿಂದ ಸೆರೆ
Crocodile spotted in Halima's well, caught by farmers
ಸವದತ್ತಿ 23: ಸಮೀಪದ ಸಿಂಗಾರಕೊಪ್ಪ ರಸ್ತೆ ಮಾರ್ಗ ಹಲಿಮನವರ ಬಾವಿಯಲ್ಲಿ ಬುಧವಾರ ಸಂಜೆ ವೇಳೆಯಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಸೇರಿ ಅದನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.
ಮಲಪ್ರಭಾ ನದಿಯ ದಡಕ್ಕೆ ಹೊಂದಿಕೊಂಡಿರುವ ಕ್ಯಾರಸಪ್ಪನಹಳ್ಳದ ಹತ್ತಿರವಿರುವ ಹಲಿಮನವರ ಬಾವಿಯಲ್ಲಿ ನೀರು ಕಡಿಮೆಯಾಗಿದ್ದರಿಂದ ಮೊಸಳೆ ಕಾಣಿಸಿಕೊಂಡಿದೆ.ಬುಧವಾರ ಸಂಜೆ ವೇಳೆ ರೈತರು ಹೊಲಕ್ಕೆ ನೀರು ಹರಿಸಲು ಹೋದಾಗ ಬಾವಿಯಲ್ಲಿ ಮೊಸಳೆ ಇರುವುದು ಗಮನಕ್ಕೆ ಬಂದಿದೆ. ಕೂಡಲೇ ಎಚ್ಚೆತ್ತ ರೈತ ಮುಖಂಡರು ಹಾಗೂ ಸಾರ್ವಜನಿಕರು ಒಗ್ಗೂಡಿ ಮೊಸಳೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಳಿಕ ಮಾತನಾಡಿದ ರೈತ ಮುಖಂಡ ಅಲೀಸಾಬ ನೂಲಗಿ, ನದಿ ದಡದ ಪ್ರದೇಶಗಳಲ್ಲಿ ಮೊಸಳೆಗಳ ಕಾಟ ಹೆಚ್ಚಾಗುತ್ತಿರುವುದು ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ರೈತರು ಪ್ರತಿದಿನ ಬೆಳ್ಳಗೆ 5ಗಂಟೆಗೆ ಕತ್ತಲೆಯಲ್ಲಿಯೇ ಹೊಲಕ್ಕೆ ನೀರು ಹರಿಸಲು ಹೋಗಬೇಕಾಗುತ್ತದೆ. ಜೀವದ ಹಂಗು ತೊರೆದು ಕೆಲಸ ಮಾಡುವ ಪರಿಸ್ಥಿತಿ ಇದೆ. ಆದ್ದರಿಂದ ಸರ್ಕಾರ ರೈತರ ಸುರಕ್ಷತೆಗಾಗಿ ಬೆಳಿಗ್ಗೆ 7ಗಂಟೆಯಿಂದಲೇ ತ್ರೀ ಫೇಸ್ ವಿದ್ಯುತ್ ಸಂಪರ್ಕ ನೀಡಬೇಕು, ಎಂದು ಹೇಳಿದರು.
ಬಳಿಕ ಮೊಸಳೆ ಸೆರೆಹಿಡಿದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಮೊಸಳೆಯನ್ನು ತಮ್ಮ ವಶಕ್ಕೆ ಪಡೆದುಕೊಂಡರು. ನಂತರ ಮೊಸಳೆಯನ್ನು ನದಿಯ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು ರೈತರು ತೋರಿದ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಸುಲ್ತಾನ್ ಗಡಾದ, ರಾಜೇಸಾಬ ಹಲೀಮನವರ, ದಾದಾಪೀರ ಮಂಟೂರ, ದಿಲಾವರ ಸನದಿ, ಇಮಾಮಸಾಬ ಹಲೀಮನವರ, ಪಕ್ಕರುಸಾಬ ನೂಲಗಿ, ಕಾಶೀಮ ಗಿಡದನ್ನವರ, ಇನ್ನೂ ಅನೇಕ ರೈತರು ಉಪಸ್ಥಿತರಿದ್ದರು.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 