ಮಹಾಕುಂಭ ಮೇಳದಿಂದ ಕಾಶಿಗೆ ತೆರಳುತ್ತಿದ್ದ ಕ್ರೂಸರ್ ಅಪಘಾತ: ಮೂವರ ಸಾವು
Cruiser going from Mahakumbha Mela to Kashi mishap: Three killed
ಬೀದರ್ 21: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಕಾಶಿಗೆ ತೆರಳುತ್ತಿದ್ದ ಬೀದರ್ ನ ನಿವಾಸಿಗಳಿದ್ದ ಕ್ರೂಸರ್ ಅಪಘಾತವಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಉತ್ತರ ಪ್ರದೇಶದ ಕಾಶಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬೀದರ್ ನ ಮೂರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಮೃತ ಮತ್ತು ಗಾಯಾಳುಗಳು ಬೀದರ್ ನ ಲಾಡಗೇರಿಯ ನಿವಾಸಿಗಳು ಎಂದು ತಿಳಿದು ಬಂದಿದೆ.
ನಗರದ ಲಾಡಗೇರಿ ನಿವಾಸಿಗಳಾದ ಲಕ್ಷ್ಮಿ (57), ನೀಲಮ್ಮಾ (62), ಸಂತೋಷಕುಮಾರ (45), ಸುನೀತಾ (40), ಕಲಾವತಿ ಹ (40) ಮೃತಪಟ್ಟವರು.
ಸುಲೋಚನಾ, ಸುಜಾತ, ಕವಿತಾ, ಅನಿತಾ, ಖುಷಿ, ಗಣೇಶ, ಸಾಯಿ, ಭಗವಂತ ಹಾಗೂ ಶಿವಾ ಗಾಯಗೊಂಡವರು.
ವಾರಾಣಸಿಯ ರೂಪಾಪೂರ ಬಳಿ ಶುಕ್ರವಾರ ನಸುಕಿನ ಜಾವ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕುಂಭಮೇಳದ ಭಕ್ತರಿದ್ದ ಕ್ರೂಸರ್ ಡಿಕ್ಕಿ ಹೊಡೆದಿದ್ದು, ವಾಹನ ನುಜ್ಜುಗುಜ್ಜಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 