ವಿದ್ಯುತ್ ಕಟ್ ಮಾಡಿ ಕಚೇರಿ ದೋಚಿದ ಕಳ್ಳರು
ಬೆಂಗಳೂರು, ಡಿ. 18 ವಿದ್ಯುತ್
ಕಟ್ ಮಾಡಿ ಆಡಿಟರ್ ಕಚೇರಿಯಿಂದ ಕಳ್ಳರು ಲಕ್ಷ ಲಕ್ಷ ದೋಚಿ ಪರಾರಿಯಾಗಿರುವ ಘಟನೆಸಿಟಿ ಮಾರ್ಕೆಟ್ ನಲ್ಲಿ
ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದೇ ತಿಂಗಳು 13ರಂದು ಮಧ್ಯರಾತ್ರಿ ಹೆಲ್ಮೆಟ್
ಧರಿಸಿ ಬಂದ ಖದೀಮರು ಕಟ್ಟಿಂಗ್ ಪ್ಲೇಯರ್ನಲ್ಲಿ ಸಿಸಿಟಿವಿಯ ವೈರ್ ಕಟ್ ಮಾಡಿ ಕಳ್ಳತನ ಮಾಡಿದ್ದಾರೆ.
ಸುಮಾರು 13 ಲಕ್ಷ ನಗದು, ಮೂರು ಲ್ಯಾಪ್ಟಾಪ್ ಹಾಗೂ ಎರಡು ಮೊಬೈಲ್ಗಳನ್ನು ಕಳವು ಮಾಡಿದ್ದ ಕಳ್ಳರ
ಕೈಚಳಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಘಟನೆ ನಡೆದು ನಾಲ್ಕು ದಿನ ಕಳೆದಿದ್ದು, ಆಡಿಟರ್
ಕಚೇರಿ ಮಾಲೀಕರು ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಸಿಟಿ ಮಾರ್ಕೆಟ್ ಪೊಲೀಸರು ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 