ಪರಿಸರ ಸಂರಕ್ಷಣೆ ಜಾಗೃತಿಗಾಗಿ ಸೈಕಲ್ ಯಾತ್ರೆ
ಬೆಂಗಳೂರು, ಡಿ.19 ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆ, ಕೋಮು ಸೌಹಾರ್ದತೆ ಕುರಿತು ಜನರಲ್ಲಿ ಅರಿವು ಮೂಡಿಸಲು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ "ಪರ್ಯಾವರಣ್ ಜಾಗೃತ್ ಅಭಿಯಾನ್" ಹೆಸರಿನಲ್ಲಿ ಸೈಕಲ್ ಯಾತ್ರೆ ಹಮ್ಮಿಕೊಂಡಿರುವುದಾಗಿ ಎವಿಕೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಿರ್ದೇಶಕ ಡಾ.ಸಾನಂದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಸಮಾಜದ ಕಾಳಜಿ ಕುಗ್ಗುತ್ತಿದ್ದು, ಅವರಲ್ಲಿ ಪರಿಸರ ಸ್ವಚ್ಛತೆ, ಅರಣ್ಯ ಸಂರಕ್ಷಣೆ ಸೇರಿದಂತೆ ಹಲವು ವಿಚಾರಗಳಲ್ಲಿ ಅರಿವು ಮೂಡಿಸಲು 12 ಜನರೊಂದಿಗೆ ಈ ಸೈಕಲ್ ಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.ಸೈಕಲ್ ಯಾತ್ರೆಯನ್ನು ಕಳೆದ ಅಕ್ಟೋಬರ್ 2 ರಂದು ಜಮ್ಮುವಿನ ಗಾಂಧಿ ಚೌಕದಲ್ಲಿ ಪ್ರಾರಂಭಿಸಿದ್ದು, ಜ.30ಕ್ಕೆ ಕನ್ಯಾಕುಮಾರಿಯ ಗಾಂಧಿ ಮೆಮೊರಿಯಲ್ ಭವನದಲ್ಲಿ ಕೊನೆಗೊಳ್ಳಲಿದೆ ಎಂದರು. ಈಗಾಗಲೇ ದೇಶದ ಅನೇಕ ರಾಜ್ಯಗಳನ್ನು ಸುತ್ತಾಡಿ ಅಲ್ಲಿನ ಪ್ರಮುಖ ಶಾಲಾ, ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಪನ್ಯಾಸಗಳು ಹಾಗೂ ವಿಚಾರ ಸಂಕಿರಣಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಎವಿಕೆ ಸಮೂಹ ಸಂಸ್ಥೆಯ ಮುಖ್ಯಸ್ಥ ಡಾ.ರಾಜೀವ್ ರೈ, ಕೆವಿ ನಾಗರಾಜು ಮೂರ್ತಿ ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 