ದ.ಕ.ಜಿಲ್ಲೆ : ಸರಕಾರಿ ಕಚೇರಿಗಳ ಸೇವೆ ಮೊಟಕು
ಮಂಗಳೂರು , ಮಾ.18 : ಕೊರೋನಾ ವೈರಸ್ ವ್ಯಾಪಿಸುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಕಚೇರಿಗಳ ಸಾರ್ವಜನಿಕ ಸೇವೆಗಳನ್ನು ನಿರ್ಬಂಧಿಸಿ ದ.ಕ.ಜಿಲ್ಲಾಧಿಕಾರಿ ಸಿಂದೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.ಸಾರ್ವಜನಿಕ ರು ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ಪಡೆಯುವಂತಹ ಹಾಗೂ ಜನ ಹೆಚ್ಚು ಸೇರುವಂತಹ ಇಲಾಖೆಗಳ ಸೇವೆಯನ್ನು ಮಾ.31 ರ ತನಕ ನಿರ್ಬಂಧಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.ಸಾರಕಾರಿ ಕಚೇರಿಗಳಿಗೆ ರಜೆ ನೀಡಲಾಗಿಲ್ಲ , ಆದರೆ ಅಲ್ಲಿ ಲಭಿಸುವ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಮುಖ್ಯವಾಗಿ ಕಂದಾಯ ಇಲಾಖೆಯ ಸೇವೆಗಳು , ಆಧಾರ್ ತಿದ್ದುಪಡಿ , ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹೊಸ ವಾಹನಗಳ ನೋಂದಣಿ , ಹೊಸ ಡ್ರೈವಿಂಗ್ ಲೈಸನ್ಸ್ , ಉಪ ನೋಂದಣಿ ಕಚೇರಿಯ ಆಸ್ತಿ ನೋಂದಣಿ , ಸ್ಥಳೀಯ ಆಡಳಿತ ಕಚೇರಿಯ ವಿವಿಧ ಸೇವೆಗಳು , ಲೈಸನ್ಸ್ ನೀಡಿಕೆ ಇತ್ಯಾದಿ ಸೇವೆಗಳು ಮಾರ್ಚ್ 31 ರ ತನಕ ಲಭ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 