ಮಾಲೆ ಹಾಕದಂತೆ ಡಿಕೆಶಿ ಮನವಿ
ಬೆಂಗಳೂರು, ಮಾ. 12, ಆರೋಗ್ಯದ ದೃಷ್ಟಿಯಿಂದ ಅಭಿಮಾನಿಗಳು ಹೂವಿನ ಮಾಲೆ ಹಾಕುವುದು ಬೊಕ್ಕೆಗಳನ್ನು ತಂದು ಅಲರ್ಜಿ ಉಂಟು ಮಾಡದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳಿಗೆ ಕಾರ್ಯಕರ್ತರಿಗೆ ನನ್ನ ಮೇಲೆ ಪ್ರೀತಿ, ಅಭಿಮಾನ ಇದೆ. ಆದರೆ ಹೂವುಗಳ ಹಾರ ನನಗೆ ಆರೋಗ್ಯದ ದೃಷ್ಟಿಯಿಂದ ಅಲರ್ಜಿ ಯಾಗುತ್ತದೆ. ದಯವಿಟ್ಟು ಕಾರ್ಯಕರ್ತರು ಹಣವನ್ನು ದುಂದುವೆಚ್ಚ ಮಾಡಬೇಡಿ. ತಳಮಟ್ಟದಿಂದ, ಬೂತ್ ಮಟ್ಟದಿಂದ ನಾವು ಪಕ್ಷವನ್ನು ಕಟ್ಟಬೇಕಿದೆ, ಅದಕ್ಕಾಗಿ ನಿಮ್ಮ ಹಣವನ್ನು ಹೂವುಗಳಿಗಾಗಿ ವ್ಯರ್ಥ ಮಾಡಬೇಡಿ. ಸುಮ್ಮನೆ ಬಂದು ಸಿಹಿತಿಂಡಿ , ಕೇಕ್ ತಿನ್ನಿಸುವುದು ಎಲ್ಲ ಬೇಡ ಎಂದರು.ರಾಜ್ಯ ಕಾಂಗ್ರೆಸ್ ನಲ್ಲಿ ಸಮಸ್ಯೆ ಇದೆ ಎಂದು ಭಾವಿಸಿದರೆ ಅದು ಸಮಸ್ಯೆಯೇ. ಸಮಸ್ಯೆ ಇಲ್ಲ ಅಂದುಕೊಂಡರೆ ಸಮಸ್ಯೆ ಇಲ್ಲ. ನನಗೆ ಇದು ಯಾವುದೂ ಕಷ್ಟವಲ್ಲ, ಸಮಸ್ಯೆಯೂ ಅಲ್ಲ.ಹೇಗೆ ಪಕ್ಷ ಕಟ್ಟುತ್ತೇವೆ ನೋಡುತ್ತಾ ಇರಿ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 