ಹಾವೇರಿಯಲ್ಲಿ ಡಿವೈಎಫ್ಐ ಜಿಲ್ಲಾ ಕಾರ್ಯಾಗಾರ; ಉದ್ಯೋಗ ಹಕ್ಕು ಚರ್ಚೆ
DYFI district workshop in Haveri; discussion on employment rights
ಹಾವೇರಿ 15 : ದೇಶದಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಲೇ ಇದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಯಾವುದೇ ಕನಿಷ್ಠ ಕಾರ್ಯಕ್ರಮ ಕೈಗೊಳ್ಳದೇ ಯುವಜನರನ್ನು ಸಂಕಷ್ಠಕ್ಕೆ ದೂಡುತ್ತಿವಿ. ಉದ್ಯೋಗದ ಹಕ್ಕು ಮೂಲಭೂತ ಹಕ್ಕು ಆದಾಗ ಮಾತ್ರ ಯುವಜನರ ಬದುಕಿಗೆ ಭದ್ರತೆ ಸಿಗಲು ಸಾಧ್ಯ, ಅದಕ್ಕಾಗಿ ಯುವಜನರು ದೊಡ್ಡ ಆಂದೋಲನ ನಡೆಸುವುದು ಅನಿವಾರ್ಯವಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಅಭಿಪ್ರಾಯಪಟ್ಟರು.ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಶನಿವಾರ ಭಾರತ ಪ್ರಾಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿ, ಸರ್ಕಾರಿ ಉದ್ಯೋಗಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಮತ್ತು ಖಾಲಿ ಹುದ್ದೆಗಳ ಭರ್ತಿಯಲ್ಲಿ ವಿಳಂಬವಾಗುತ್ತಿರುವುದು ಯುವಕರಲ್ಲಿ ನಿರಾಸೆಯನ್ನು ಉಂಟುಮಾಡುತ್ತಿದೆ ಎಂದರು.
ಖಾಸಗಿ ಕ್ಷೇತ್ರದಲ್ಲಿಯೂ ಕಡಿಮೆ ವೇತನ, ಉದ್ಯೋಗ ಭದ್ರತೆಯ ಕೊರತೆ ಹಾಗೂ ಶೋಷಣೆ ಕಂಡುಬರುತ್ತಿದೆ.ತಂತ್ರಜ್ಞಾನದ ವೇಗವಾದ ಬೆಳವಣಿಗೆಯಿಂದಾಗಿ ಹೊಸ ಕೌಶಲ್ಯಗಳ ಅಗತ್ಯ ಹೆಚ್ಚುತ್ತಿದೆ. ಆದರೆ ಆ ಕೌಶಲ್ಯಗಳನ್ನು ಪಡೆಯಲು ಬೇಕಾದ ತರಬೇತಿ ಎಲ್ಲರಿಗೂ ಲಭ್ಯವಾಗುತ್ತಿಲ್ಲ. ಮಹಿಳಾ ಯುವಕರಿಗೆ ಉದ್ಯೋಗ ಕ್ಷೇತ್ರದಲ್ಲಿ ಲಿಂಗಭೇದ ಹಾಗೂ ಸುರಕ್ಷತೆಯ ಸಮಸ್ಯೆಗಳೂ ಎದುರಾಗುತ್ತಿವೆ. ನಮ್ಮ ಹಾವೇರಿ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಜಿಲ್ಲೆಗೆ ಕೃಷಿಯಾಧಾರಿತ ಕೈಗಾರಿಕೆಗಳನ್ನು ಆರಂಭಿಸಿ, ಜಿಲ್ಲೆಯ ಯುವಜನರಿಗೆ ಉದ್ಯೋಗವಕಾಶಗಳನ್ನು ಒದಗಿಸಲು ಜಿಲ್ಲೆಯ ಜನಪ್ರತಿನಿಧಿಗಳು ವಿಶೇಷ ಪ್ರಯತ್ನ ನಡೆಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಯುವಜನರ ಉದ್ಯೋಗ, ಶಿಕ್ಷಣ ಸೇರಿದಂತೆ ಇತರ ಪ್ರಮುಖ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದರೊಂದಿಗೆ ಹೋರಾಟಗಳನ್ನು ರೂಪಿಸುವುದು.
ಹಾಗೂ ಸದಸ್ಯತ್ವ ಅಭಿಯಾನವನ್ನು ಜಿಲ್ಲೆಯಾದ್ಯಂತ ವಿಸ್ತರಿಸಿ ಯುವಜನರನ್ನು ಸಂಘಟಿಸಬೇಕು ಎಂದರು.ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲ ನಾರಾಯಣ ಕಾಳೆ ಮಾತನಾಡಿ, ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತೆ, ಸೌಹಾರ್ದತೆಗಾಗಿ ಡಿವೈಎಫ್ಐ ನಿರಂತರವಾಗಿ ಶ್ರಮಿಸುತ್ತಿದೆ. ಡಿವೈಎಫ್ಐ ಸಂವಿಧಾನ ಕಾರ್ಯಕ್ರಮ, ಧ್ಯೇಯೊದ್ದೇಶಗಳನ್ನು ಯುವಜನರ ಮಧ್ಯೆ ವ್ಯಾಪಕವಾಗಿ ಪ್ರಚಾರಗೊಳಿಸಬೇಕು. ಆ ಮೂಲಕ ಯುವಜನರನ್ನು ಸಂಘಟಿಸಿ ಅವರ ಹಕ್ಕುಗಳಿಗಾಗಿ ಪರಿಣಾಮಕಾರಿ ಹೋರಾಟಗಳನ್ನು ಕಟ್ಟುವ ಅಗತ್ಯವಿದೆ ಎಂದು ಹೇಳಿದರು.ಸದಸ್ಯತ್ವಕ್ಕೆ ಚಾಲನೆ: ಈ ಸಂದರ್ಭದಲ್ಲಿ 2026ನೇ ಸಾಲಿನ ಡಿವೈಎಫ್ಐ ಸದಸ್ಯತ್ವ ಆಂದೋಲನಕ್ಕೆ ಚಾಲನೆ ನೀಡಲಾಯ್ತು.
ಕಾರ್ಯಾಗಾರದಲ್ಲಿ ಪಾಲ್ಗೊಂಡವರೆಲ್ಲರೂ ಸದಸ್ಯತ್ವ ಶುಲ್ಕ ನೀಡಿ, ಸದಸ್ಯತ್ವ ಪಡೆದುಕೊಂಡರು.ಕಾರ್ಯಾಗಾರದಲ್ಲಿ ಜಿಲ್ಲಾ ಮುಖಂಡರಾದ ರೇಣುಕಾ ಕಹಾರ ಸ್ವಾಗತಿಸಿ, ನಿರ್ವಹಿಸಿದರು. ಖಲಂದರ್ ಅಲ್ಲಿಗೌಡ್ರ ವಂದಿಸಿದರು. ಬಸವರಾಜ ಎಸ್, ವಾಸೀಮ್ ತಿಮ್ಮಾಪೂರ, ಬೀರ್ಪ ಸೂರಣಗಿ, ಕಿಶೋರ್ ಧೋತ್ರರೆ, ಚಂದ್ರು ಬಡಿಗೇರ, ಫಕ್ಕಿರೇಶ ಹರಿಜನ, ಅರುಣ ನಾಗಾವತ್, ಚೈತ್ರಾ ಕೊರವರ, ಮಂಜುಳಾ ಹಾನಗಲ್, ಮಂಜುಳಾ ತಡಸ, ಕವಿತಾ ಪೂಜಾರ, ಮೌಲಾಲಿ ನವಲಗುಂದ, ಹರೀಶ ಗುಮ್ಮನಳ್ಳಿ, ನಿಂಗರಾಜ ಪೂಜಾರ, ವೀರಣ್ಣ ಗಡ್ಡಿಯವರ, ಮಕಬುಲ್ ಯಲ್ಲಾಪೂರ, ಚಾಂದಸಿಂಗ್ ಸಿಖ್, ವಿಠ್ಠಲ ಗೌಳಿ, ಚೇತನ ಕೊರವರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಡಿವೈಎಫ್ಐ ಕಾರ್ಯಕರ್ತರು ಭಾಗವಹಿಸಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 