ಇ .ಡಿ ದಾಳಿ ಖಂಡಿಸಿದ ದಲಿತ ಸಂಘರ್ಷ ಸಮಿತಿ
Dalit Sangharsha Samiti condemns ED raids
ಲೋಕದರ್ಶನ ವರದಿ
ಜಮಖಂಡಿ 16: ಪರಿಶಿಷ್ಟ ಜಾತಿ ಸಮುದಾಯದ ಸಚಿವರು ಹಾಗೂ ಶಾಸಕರ ಮನೆಗಳ ಮೇಲೆ ಕೇಂದ್ರದ ಬಿಜೆಪಿ ಸರ್ಕಾರ ಉದ್ದೇಶಪೂರ್ವಕವಾಗಿ ಐಟಿ ಮತ್ತು ಇ.ಡಿ ದಾಳಿ ನಡೆಸಿ ಮಾನಸಿಕ ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಪರಶುರಾಮ ಮಾಂಗ ಆರೋಪಿಸಿದರು.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಮನೆ ಮೇಲೆ ನಡೆದಿರುವ ಇ.ಡಿ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಅವರು ಹೇಳಿದರು. ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರ ಮನೆಗಳ ಮೇಲಷ್ಟೇ ಐಟಿ, ಇ.ಡಿ ದಾಳಿ ನಡೆಯುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಶಾಸಕರು ಹಾಗೂ ಸಚಿವರ ಆಸ್ತಿಗಳ ಬಗ್ಗೆ ತನಿಖೆ ನಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರದ ಈ ಕ್ರಮವನ್ನು ಜಾತಿ ವಿರೋಧಿ ನೀತಿ ಎಂದು ಆರೋಪಿಸಿದ ಅವರು, ಇದನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಬಸು ಜಮಖಂಡಿ, ರಮೇಶ ಪೂಜಾರಿ, ಅಬುಬಕರ ಕುಡಚಿ, ನದೀಮ ಗೋರೆ, ಸುನೀಲ ಘಾಟಗೆ, ಪ್ರಕಾಶ ಜಂಬಗಿ ಹಾಗೂ ಪುಂಡಲೀಕ ಮಾದರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 