ಕೀರು ಸೇತುವೆಗೆ ಹಾನಿ: ಸಂಚಾರಕ್ಕೆ ತೋಂದರೆ
ಲೋಕದರ್ಶನ ವರದಿ
ಬೈಲಹೊಂಗಲ 04: ತಾಲೂಕಿನ ಸಂಪಗಾಂವ- ಭಾಂವಿಹಾಳ ಮಧ್ಯೆ ರಸ್ತೆ (ಜರಿಹಳ್ಳ) ಇತ್ತಿಚೆಗೆ ಸುರಿದ ಭಾರಿ ಮಳೆಗೆ ಕಿರು ಸೇತುವೆ ಕೊಚ್ಚಿ ಹೋಗಿದ್ದು ಸಾರಿಗೆ ಸಂಚಾರವಿಲ್ಲದೇ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ, ಗ್ರಾಮಸ್ಥರಿಗೆ ತೀವೃ ತೊಂದರೆಯಾಗಿದೆ.
ಇತ್ತಿಚೆಗೆ ಸುರಿದ ಮಳೆಯ ಆವಾಂತರಕ್ಕೆ ಕಿರು ಸೇತುವೆ ಒಂದು ಬದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಸಂಭಂದಪಟ್ಟ ಅಧಿಕಾರಿಗಳು ತಿಂಗಳು ಕಳೆದರೂ ಕಿರು ಸೇತುವೆ ದುರಸ್ತಿ ಕಾರ್ಯ ಕೈಗೊಂಡಿಲ್ಲ. ತಕ್ಷಣ ಅಧಿಕಾರಿಗಳು ಕೆಲಸ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಭಾಂವಿಹಾಳ, ಯರಗೋಪ್ಪ, ಯರಗುದ್ದಿ, ಹಣ್ಣಿಕೇರಿ, ಜಕ್ಕನಾಯ್ಕನಕೊಪ್ಪ ಗ್ರಾಮಸ್ಥರು ಸೇರಿ ಉಗ್ರ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ನವ ನಿರ್ಮಾಪಡೆಯ ಮಂಜುನಾಥ ಉಳವಿ, ಅಜ್ಮಿರ ನದಾಫ, ಚನ್ನಪ್ಪ ಕಳ್ಳಸನ್ನವರ, ಈರಣ್ಣ ಬಡಿಗೇರ ಎಚ್ಚರಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 