ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
Danger looms: Sparks and smoke are emerging from an underground power cable on the road.
ಬೆಳಗಾವಿ : ಸ್ಥಳೀಯ ಗುರುವಾರ ಪೇಟೆ ಪ್ರದೇಶದಲ್ಲಿನ ತಿಲಕವಾಡಿ ಪೊಲೀಸ್ ಠಾಣೆಗೆ ಹೋಗುವ ರಸ್ತೆಯ ತಿರುವಿನಲ್ಲಿರುವ ಸಿಮೆಂಟ್ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಅಳವಡಿಸಲಾದ ಭೂಗತ ವಿದ್ಯುತ್ ತಂತಿಗಳಿಂದ ಬೆಂಕಿಯ ಕಿಡಿಗಳು ಹಾಗೂ ಹೊಗೆ ಹೊರ ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ನಿರಂತರ ಮಳೆಯಿಂದ ರಸ್ತೆ ಸಂಪೂರ್ಣ ಒದ್ದೆಯಾಗಿರುವ ಹಿನ್ನೆಲೆಯಲ್ಲಿ, ಈ ವಿದ್ಯುತ್ ದೋಷವು ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಹಾಗೂ ಇತರ ವಾಹನ ಚಾಲಕರಿಗೆ ವಿದ್ಯುತ್ ಆಘಾತ ಅಥವಾ ಪ್ರಾಣಾಪಾಯದ ಗಂಭೀರ ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆ ಸಂಭವಿಸುವ ಮುನ್ನವೇ ಹೆಸ್ಕಾಂ (HESCOM) ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಭೂಗತ ವಿದ್ಯುತ್ ದೋಷವನ್ನು ಪರಿಶೀಲಿಸಿ ಅಗತ್ಯ ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಬಗ್ಗೆ ಸಾರ್ವಜನಿಕ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡುವುದು ಅತ್ಯಗತ್ಯ ಎಂದು ಬೆಳಗಾವಿ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ಟೀಮ್ ನ ಮುಖ್ಯಸ್ಥ ಸಂತೋಷ್ ಆರ್. ದಾರೇಕರ್ ಅವರು ಹೇಳಿದ್ದಾರೆ. ಅಲ್ಲದೆ ಸಂಬಂಧ ಪಟ್ಟವರು ಇದರ ಕಡೆಗೆ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 