ಜಿರಗಾಳ ಅವರಿಗೆ ಆತ್ಮೀಯ ಬೀಳ್ಕೊಡುಗೆ
ಬಾಗಲಕೋಟೆ೦೭: ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಾಲಯದ ಸಹಾಯಕರಾಗಿ 25 ವರ್ಷಗಳ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದಿದ ವಿ.ಬಿ.ಜಿರಗಾಳ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ವಯೋನಿವೃತ್ತಿ ಹೊಂದಿದ ವಿ.ಬಿ.ಜಿರಗಾಳ ದಂಪತಿಗಳಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು. ನಂತರ ಗ್ರಂಥಾಲಯದ ಸಿಬ್ಬಂದಿಗಳಾದ ಸುನಿಲ್ ಮುದಗಲ್ಲ, ಆರ್.ಎನ್.ವಾಲಿಕಾರ ಮಾತನಾಡಿ ಸರಕಾರಿ ಸೇವೆಯಲ್ಲಿ ನಿವೃತ್ತಿ ಸಹಜವೆಂದರು. ಜಗತ್ತಿನಲ್ಲಿರುವ ಎಲ್ಲ ಜೀವರಾಶಿಗಳ ನೋವು-ನಲಿವಿನ ಜೊತೆಗೆ ನಾನು ಕೂಡ ಒಬ್ಬರಾಗಿ ಇರುಬೇಕು. ಏಕಾಂಗಿಯಾಗಿ ಇರದೇ ಹಸುವಿನಂತಹ ಮನಸ್ಸಿನಿಂದ ಎಲ್ಲರ ಜೊತೆ ಸಹ ಬಾಳ್ವೆಯಿಂದ ಬದುಕಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯ ಗ್ರಂಥಾಲಯ ಅಧಿಕಾರಿ ಎಂ.ಎಸ್.ರಬ್ಬಿನಾಳ ಮಾತನಾಡಿ ಪ್ರತಿಯೊಬ್ಬರು ಪ್ರಮಾಣಿಕ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. 25 ವರ್ಷ ನಿರಂತರ ಸೇವೆಯಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದಿದ ಜಿರಗಾಳ ಅವರ ಕಾರ್ಯವನ್ನು ಶ್ಲಾಘಿಸಿದರು. ಅವರ ನಿವೃತ್ತಿ ಜೀವನ ಸುಖವಾಗಿರಲೆಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಎಂ.ನಾಡಗೌಡ, ಎಂ.ಎನ್.ತಳವಾರ, ಎ.ಎಸ್.ಆಲಗೂರ, ಮುತ್ತಪ್ಪ ಜಂಗಮ ಶೆಟ್ಟಿ, ಮುತ್ತಪ್ಪ ಬಿಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸುನೀಲ ಮುದಗಲ್ ನಿರೂಪಿಸಿದರು. ಎ,ಜಿ ಕಬ್ಬಿನ ಸ್ವಾಗತಿಸಿ, ಅಸೋದಿ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 