*ಮೂವರು ಸಮುದ್ರ ಪಾಲು; ಓರ್ವನ ಶವ ಪತ್ತೆ - ಇನ್ನಿಬ್ಬರಿಗೆ ಹುಡುಕಾಟ
Sea
ಮೂವರು ಸಮುದ್ರ ಪಾಲು; ಓರ್ವನ ಶವ ಪತ್ತೆ - ಇನ್ನಿಬ್ಬರಿಗೆ ಹುಡುಕಾಟ
ಕಾರವಾರ, ಜ. 21 : ಸಮುದ್ರದಲ್ಲಿ ಈಜಲು ತೆರಳಿದ ಓರ್ವನನ್ನು ರಕ್ಷಿಸಲು ಧಾವಿಸಿದ ನಾಲ್ವರ ಪೈಕಿ ಇಬ್ಬರೂ ಕಡಲ ಅಲೆಯ ಪಾಲಾಗಿದ್ದು ಈರ್ವರನ್ನು ಮೀನುಗಾರರು ರಕ್ಷಿಸಿದ ಘಟನೆ ಗೋಕರ್ಣದಲ್ಲಿ ನಡೆದಿದೆ.
ಬೆಂಗಳೂರು ಪ್ರವಾಸಿಗ ತಿಪ್ಪೇಶನನ್ನು ಸಮುದ್ರದಲ್ಲಿ ರಕ್ಷಿಸಲು ಹೋದ ಯುವತಿ ಸುಮಾ, ಯುವಕ ರವಿ ಸಮುದ್ರಪಾಲಾಗಿದ್ದಾರೆ .
ಬೆಂಗಳೂರಿನಿಂದ ಇಂದು 16 ಜನ ದೇವರ ದರ್ಶನ ಪಡೆಯಲು ಗೋಕರ್ಣಕ್ಕೆ ಆಗಮಿಸಿದ್ದರು. ಊಟ ಮಾಡಿ ದೇವರ ದರ್ಶನ ಪಡೆದ ನಂತರ ಯುವಕ ತಿಪ್ಪೇಶ್ ಸಮುದ್ರಕ್ಕಿಳಿದಿದ್ದ.ಅಲೆಯ ಅಬ್ಬರ ಆತನನ್ನು ನೀರಿನ ಒಳಕ್ಕೆ ಸೆಳೆಯಿತು. ಇದನ್ನು ಗಮನಿಸಿದ ಸುಮಾ ಎಂಬ ಯುವತಿ ಆತನ ರಕ್ಷಣೆಗಾಗಿ ದಾವಿಸಿದಳು. ಆಕೆಯನ್ನು ಅಲೆಯು ಸೆಳೆಯಿತು. ಇದನ್ನು ಗಮನಿಸಿದ ರವಿ ಹಾಗೂ ರತ್ನಮ್ಮ ,ಪವಿತ್ರ ಸುಮಳನ್ನು ರಕ್ಷಿಸಲು ಮುಂದಾದರು. ದುರಾದೃಷ್ಟವಶಾತ್ ಸುಮಾ , ರವಿ ಕೂಡ ಸಮುದ್ರದ ಅಲೆಗೆ ಸಿಲುಕಿದರು. ಈ ವೇಳೆಗೆ ಧಾವಿಸಿದ ಸ್ಥಳೀಯರು ಪವಿತ್ರ ಹಾಗೂ ರತ್ನಮ್ಮ ಎಂಬುವವರನ್ನು ರಕ್ಷಿಸಿದರು. ಸ್ಥಳೀಯ ಮೀನುಗಾರರು ರಕ್ಷಣೆಗೆ ಸಹಾಯ ಮಾಡಿದ್ದಾರೆ.ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿಪ್ಪೇಶ ಶವ ದೊರೆತಿದೆ. ಸುಮಾ, ರವಿ ಅವರಿಗೆ ಹುಡುಕಾಟ ನಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 