ಹುಟ್ಟುಹಬ್ಬದಂದು ಮಾದಕ ವಸ್ತು ಸೇವಿಸಿ ಇಬ್ಬರ ಸಾವು: ಮೆಡಿಕಲ್ ಸ್ಟೋರ್ ಮಾಲೀಕ ಬಂಧನ
ಬೆಂಗಳೂರು, ನ.22 : ಹುಟ್ಟು ಹಬ್ಬದ ಸಂದರ್ಭದಲ್ಲಿ ಮಾದಕ ವಸ್ತುಗಳ ಜೊತೆಗೆ ಮತ್ತು ಬರುವ ಮಾತ್ರೆ ಸೇವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆಗೆ ಸಂಬಂಧಿಸಿ, ಮಾತ್ರೆ ನೀಡಿದ ಮೆಡಿಕಲ್ ಸ್ಟೋರ್ ಮಾಲೀಕನನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.
ರಾಜಾಜಿನಗರದ ಮನ್ದೀಪ್ ಫಾಮರ್ಾ ಮೆಡಿಕಲ್ ಸ್ಟೋರ್ನ ಮಾಲೀಕ ಮನೀಷ್ ಕುಮಾರ್ (36) ಬಂಧಿತ ಆರೋಪಿ. ರಾಜಾಜಿನಗರದ 4ನೇ ಬ್ಲಾಕ್ನ ವಾಸಿಯಾಗಿದ್ದ ಮನೀಷ್ ಕುಮಾರ್, ಮೋದಿ ಆಸ್ಪತ್ರೆಯ ಸಿಗ್ನಲ್ ಬಳಿ ಮನ್ದೀಪ್ ಫಾಮರ್ಾ ಎಂಬ ಔಷಧಿ ಅಂಗಡಿ ನಡೆಸುತ್ತಿದ್ದ. ಕಾನೂನುಬಾಹಿರವಾಗಿ ಟೈಡಾಲ್ ಮಾತ್ರೆಗಳನ್ನು ಖರೀದಿಸಿ ಮಾರಾಟ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೈಡಾಲ್ ಮಾತ್ರೆಯನ್ನು ಪುಡಿಮಾಡಿಕೊಂಡು ಸಿರಂಜ್ಗೆ ಡಿಸ್ಟಲ್ ವಾಟರ್ಗೆ ಸೇರಿಸಿ ಸಿರಂಜ್ಗೆ ತುಂಬಿಸಿಕೊಂಡು ನಶೆ ಬರಲು ಚುಚ್ಚಿಕೊಂಡಿದ್ದ ಕೋದಂಡರಾಮಪುರದ ಅಭಿಲಾಷ್ ಹಾಗೂ ಗೋಪಿ ಮೃತಪಟ್ಟಿದ್ದರು.
ತೀವ್ರ ಅಸ್ವಸ್ಥನಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಹಾನ್ ಎಂಬಾತ ವಿಚಾರಣೆಯ ವೇಳೆ ಪೊಲೀಸರಿಗೆ ಮಾತ್ರೆ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 