ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು
ಕಾರವಾರ, ಸೆ 22 ಬೆಂಗಳೂರಿನಿಂದ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗನೋರ್ವ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹೊನ್ನಾವರ ಬಳಿಯ ಮುಡರ್ೆಶ್ವರದಲ್ಲಿ ಭಾನುವಾರ ನಡೆದಿದೆ.
ನಟರಾಜ್ ಮೃತಪಟ್ಟ ದುದರ್ೆವಿ. ಒಟ್ಟು 11 ಮಂದಿಯ ತಂಡ ಬೆಂಗಳೂರಿನಿಂದ ಪ್ರವಾಸಕ್ಕೆಂದು ತೆರಳಿತ್ತು. ಇಂದು ಮುಂಜಾನೆ ಮುಡರ್ೆಶ್ವರದಲ್ಲಿ ನಟರಾಜ್ ಸೇರಿ ಒಟ್ಟು ಐವರು ಸಮುದ್ರಕ್ಕೆ ಇಳಿದಿದ್ದರು. ನೀರಿನಲ್ಲಿ ಸಿಲುಕಿದ್ದ ಅವರಲ್ಲಿ ನಾಲ್ವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದರು.
ಆದರೆ, ನಟರಾಜ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಐವರು ನೀರಿಗೆ ಇಳಿಯುವ ಮೊದಲು, ಸ್ಥಳದಲ್ಲಿದ್ದ ಮೀನುಗಾರರು ನೀರಿನ ಆಳಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದರು. ಆದರೂ ಅದ್ಯಾವುದನ್ನು ಲೆಕ್ಕಿಸದೇ ಇವರು ಆಳವಾದ ನೀರಿಗೆ ಇಳಿದಿದ್ದರು ಎನ್ನಲಾಗಿದೆ. ನಟರಾಜ್ ಶವವನ್ನು ಮೀನುಗಾರರೇ ದಡಕ್ಕೆ ತಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಡರ್ೆಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 