ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಾವು : ಭಾರತದಲ್ಲೇ ಹೆಚ್ಚು
ನವದೆಹಲಿ, ಅ 19 : ಜಾಗತಿಕ ಹಸಿವಿನ ಸೂಚ್ಯಂಕ ಪಟ್ಟಿಯಲ್ಲಿ ಭಾರತ ನೆರೆ ಹೊರೆಯ ದೇಶಗಳಿಗಿಂತಲೂ ಹೀನಾಯ ಸ್ಥಿತಿಯಲ್ಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದ ನಂತರ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಾವಿನ ಪ್ರಕರಣಗಳು ಭಾರತದಲ್ಲೇ ಹೆಚ್ಚಾಗಿ ಸಂಭವಿಸುತ್ತಿದೆ ಎಂಬ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ವಿಶ್ವದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಚ್ಚು ಮಕ್ಕಳ ಸಾವು ಭಾರತದಲ್ಲಿಯೇ ಸಂಭವಿಸುತ್ತಿದೆ ಎಂದು ಯುನಿಸೆಫ್ ವಿಶ್ವ ಮಕ್ಕಳ ಸ್ಥಿತಿಗತಿ ವರದಿ 2019 ತಿಳಿಸಿದೆ.
ಅಗತ್ಯ ಪೋಷಕಾಂಶಗಳ ಕೊರತೆಯಿಂದಾಗಿ ಮಕ್ಕಳು ಸಾವನ್ನಪ್ಪುತ್ತಿದ್ದು 2018 ನೇ ಸಾಲಿನಲ್ಲಿ ಪೋಷಕಾಂಶಗಳ ಕೊರತೆ ಮತ್ತು ಇನ್ನಿತರೆ ಕಾರಣಗಳಿಂದಾಗಿ ಭಾರತದಲ್ಲಿ 8.8 ಲಕ್ಷ ಮಕ್ಕಳು ಮೃತಪಟ್ಟಿರುವುದಾಗಿ ಯುನಿಸೆಫ್ ಮಕ್ಕಳ ವರದಿಯಲ್ಲಿ ಹೇಳಲಾಗಿದೆ.
ಇತ್ತೀಚೆಗಷ್ಟೇ ಜಾಗತಿಕ ಹಸಿವಿನ ಸೂಚ್ಯಂಕ ಪಟ್ಟಿಯನ್ನು ಯುನಿಸೆಫ್ ಬಿಡುಗಡೆ ಮಾಡಿತ್ತು. ಇದರಲ್ಲಿ ಭಾರತ 102 ನೇ ಸ್ಥಾನದಲ್ಲಿತ್ತು. ನೆರೆ ದೇಶಗಳಾದ ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾಕ್ಕೆ ಹೋಲಿಸಿದರೆ ಭಾರತದ ಸ್ಥಿತಿ ಹೀನಾಯವಾಗಿತ್ತು. ಹಸಿವಿನ ಪ್ರಮಾಣವೂ ಹೆಚ್ಚಾಗಿದೆ ಎಂಬುದು ಯುನಿಸೆಫ್ ವರದಿಯಿಂದ ಬೆಳಕಿಗೆ ಬಂದಿತ್ತು.
ಈಗ ಯುನಿಸೆಫ್ ಮಕ್ಕಳ ಸಾವಿನ ಸ್ಥಿತಿಗತಿಯ ವರದಿಯನ್ನು ಬಹಿರಂಗಪಡಿಸಿದೆ. ಈ ಅಪಾಯದಿಂದ ಪಾರಾಗಲು ಭಾರತ 2022 ರ ವೇಳೆಗೆ ಪೋಷಣ ಅಭಿಯಾನ ಯೋಜನೆಯನ್ನು ಸಮರ್ಪಕವಾಗಿ ಮತ್ತು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಇಲ್ಲದೇ ಹೋದಲ್ಲಿ ಈ ಯೋಜನೆಯ ಉದ್ದೇಶ ನಿರರ್ಥಕವಾಗುತ್ತದೆ ಎಂದು ವರದಿ ಹೇಳಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 