ಭಟ್ಕಳದಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಡಿಜಿಪಿ ದೇವ್ ಜ್ಯೋತಿ
ಭಟ್ಕಳ,
ಏ 9,ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ೯ ಮಂದಿಯಲ್ಲಿ ಕೊರೋನಾ
ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರಾದ್ಯಂತ ವೈದ್ಯಕೀಯ ತುರ್ತು ಪರಿಸ್ಥಿತಿ
ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಸೋಂಕು ಹರಡಂತೆ ನೋಡಿಕೊಳ್ಳುವ ಸಲುವಾಗಿ
ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು
ಖುದ್ದಾಗಿ ಪರೀಕ್ಷಿಸಲು ಪಶ್ಚಿಮ ವಲಯ ಪೊಲೀಸ್ ಐಜಿಪಿ ದೇವ್ಜ್ಯೋತಿ ಭಟ್ಕಳಕ್ಕೆ ಭೇಟಿ
ನೀಡಿ ಪರಿಶೀಲಿಸಿದರು. ಗೃಹ ಕ್ವಾರೆಂಟೈನ್ ಆಗಿ ಪರಿವರ್ತಿಸಲಾಗಿರುವ ಅಂಜುಮನ್
ಹಾಸ್ಟೆಲ್ ಸೇರಿದಂತೆ ಭಟ್ಕಳ ತಾಲೂಕಿನ ಆಸ್ಪತ್ರೆ ಹಾಗೂ ಇತರ ಪ್ರದೇಶಗಳಿಗೆ ತೆರಳಿ
ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ
ಅವರು, ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯ ಜನತೆಯಲ್ಲಿ ಜಾಗೃತಿ
ಮೂಡಿಸಲಾಗುತ್ತಿದೆ. ಸರ್ಕಾರದ ಕ್ರಮಕ್ಕೆ ಜನರಿಂದ ವ್ಯಾಪಕ ಸಹಕಾರ ದೊರೆಯುತ್ತಿದೆ.
ಹಲವೆಡೆ ಸೋಂಕು ಶಂಕಿತರು ಸ್ವಪ್ರೇರಣೆಯಿಂದ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದಾರೆ
ಎಂದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 