ಭಟ್ಕಳದಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಡಿಜಿಪಿ ದೇವ್ ಜ್ಯೋತಿ
ಭಟ್ಕಳ,
ಏ 9,ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ೯ ಮಂದಿಯಲ್ಲಿ ಕೊರೋನಾ
ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರಾದ್ಯಂತ ವೈದ್ಯಕೀಯ ತುರ್ತು ಪರಿಸ್ಥಿತಿ
ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಸೋಂಕು ಹರಡಂತೆ ನೋಡಿಕೊಳ್ಳುವ ಸಲುವಾಗಿ
ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದನ್ನು
ಖುದ್ದಾಗಿ ಪರೀಕ್ಷಿಸಲು ಪಶ್ಚಿಮ ವಲಯ ಪೊಲೀಸ್ ಐಜಿಪಿ ದೇವ್ಜ್ಯೋತಿ ಭಟ್ಕಳಕ್ಕೆ ಭೇಟಿ
ನೀಡಿ ಪರಿಶೀಲಿಸಿದರು. ಗೃಹ ಕ್ವಾರೆಂಟೈನ್ ಆಗಿ ಪರಿವರ್ತಿಸಲಾಗಿರುವ ಅಂಜುಮನ್
ಹಾಸ್ಟೆಲ್ ಸೇರಿದಂತೆ ಭಟ್ಕಳ ತಾಲೂಕಿನ ಆಸ್ಪತ್ರೆ ಹಾಗೂ ಇತರ ಪ್ರದೇಶಗಳಿಗೆ ತೆರಳಿ
ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ
ಅವರು, ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯ ಜನತೆಯಲ್ಲಿ ಜಾಗೃತಿ
ಮೂಡಿಸಲಾಗುತ್ತಿದೆ. ಸರ್ಕಾರದ ಕ್ರಮಕ್ಕೆ ಜನರಿಂದ ವ್ಯಾಪಕ ಸಹಕಾರ ದೊರೆಯುತ್ತಿದೆ.
ಹಲವೆಡೆ ಸೋಂಕು ಶಂಕಿತರು ಸ್ವಪ್ರೇರಣೆಯಿಂದ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದಾರೆ
ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 