ಆರ್ಥಿಕತೆ ಕುಸಿತ : ಇಳಿದ ತಿರುಮಲ ಹುಂಡಿ ಸಂಗ್ರಹ
ತಿರುಮಲ, ಅ 9: ಭಾರತದ ಕುಸಿಯುತ್ತಿರುವ ಆರ್ಥಿಕತೆಯ ಪ್ರಭಾವ ತಿರುಮಲ ತಿರುಪತಿಯ ಶ್ರೀವಾರಿ ಹುಂಡಿಗೂ ತಟ್ಟಿದೆ. ಮಂಗಳವಾರ ಕೊನೆಗೊಂಡ ತಿರುಪತಿ ತಿಮ್ಮಪ್ಪನ ಒಂಭತ್ತು ದಿನಗಳ ಬ್ರಹ್ಮೋತ್ಸವಕ್ಕೆ ಭಕ್ತರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದ್ದರೂ ಶ್ರೀವಾರಿ ಹುಂಡಿ ಸಂಗ್ರಹ ತೀವ್ರವಾಗಿ ಇಳಿಕೆ ಕಂಡಿದೆ. ಒಂಭತ್ತು ದಿನಗಳ ಬ್ರಹ್ಮೋತ್ಸವದ ಸಂದರ್ಭದಲ್ಲಿ ಸುಮಾರು 7.074 ಲಕ್ಷ ಯಾತ್ರಿಕರು ತಿರುಮಲದ ಶ್ರೀವೇಂಕಟೇಶ್ವರನ ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಬ್ರಹ್ಮೋತ್ಸವದ ಸಂದರ್ಭದಲ್ಲಿ 5.9 ಲಕ್ಷ ಯಾತ್ರಿಕರು ಭೇಟಿ ನೀಡಿದ್ದರು. ಯಾತ್ರಿಕರ ಸಂಖ್ಯೆ ಹೆಚ್ಚಾಗಿದ್ದರೂ ಹುಂಡಿ ಸಂಗ್ರಹ ಕಡಿಮೆಯಾಗಿದೆ. ಕಳೆದ ವರ್ಷ ಹುಂಡಿ ಸಂಗ್ರಹ 20.52 ಕೋಟಿ ರೂ ಇದ್ದು ಈ ವರ್ಷ 20.40 ಕೋಟಿ ರೂ ಗೆ ಇಳಿಕೆಯಾಗಿದೆ. ಕಳೆದ ವರ್ಷ ಬ್ರಹ್ಮೋತ್ಸವದ ಸಂದರ್ಭದಲ್ಲಿ 2.17 ಲಕ್ಷ ಜನರು ಮುಡಿ ಕೊಟ್ಟಿದ್ದರೆ ಈ ವರ್ಷ 3.23 ಲಕ್ಷ ಭಕ್ತರು ಮುಡಿ ಅರ್ಪಿಸಿದ್ದು ಈ ಸಂಖ್ಯೆ ಶೇಕಡ 50 ರಷ್ಟು ಹೆಚ್ಚಳ ಕಂಡಿದೆ. ಈ ವರ್ಷ 34.01 ಲಕ್ಷ ಲಾಡು ಪ್ರಸಾದ ಮಾರಾಟವಾಗಿದ್ದು ಕಳೆದ ವರ್ಷ ಬ್ರಹ್ಮೋತ್ಸವದ ಸಂದರ್ಭದಲ್ಲಿ ಹತ್ತು ಲಕ್ಷ ಕಡಿಮೆ ಅಂದರೆ 24.01 ಲಕ್ಷ ಲಾಡು ವಿತರಿಸಲಾಗಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 