ಎಸ್ಪಿಯಾಗಿ ದೀಪನ್ ಅಧಿಕಾರ ಸ್ವೀಕಾರ
Deepan takes charge as SP
ಕಾರವಾರ 16: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ದೀಪನ್ ಎಂ.ಎನ್. ಅಧಿಕಾರ ವಹಿಸಿಕೊಂಡರು.ಜಿಲ್ಲೆಗೆ ಆಗಮಿಸಿದ ನೂತನ ಎಸ್.ಪಿ. ದೀಪನ್ ಎಂ.ಎನ್. ಅವರನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಾಂಪ್ರದಾಯಿಕ ಗೌರವಗಳೊಂದಿಗೆ ಸ್ವಾಗತಿಸಲಾಯಿತು.
ಸಿಬ್ಬಂದಿಯಿಂದ ಗೌರವ ರಕ್ಷೆ ಸ್ವೀಕರಿಸಿದ ನಂತರ, ಹಿರಿಯ ಅಧಿಕಾರಿಗಳು ಹೂಗುಚ್ಛ ನೀಡಿ ಅವರನ್ನು ಬರಮಾಡಿಕೊಂಡರು. ನಂತರ, ನಿರ್ಗಮಿತ ಎಸ್.ಪಿ. ಎಂ. ನಾರಾಯಣ್ ಅವರು ದೀಪನ್ ಎಂ.ಎನ್. ಅವರಿಗೆ ಜಿಲ್ಲೆಯ ಪರಿಸ್ಥಿತಿ ಮತ್ತು ಆಡಳಿತದ ಕುರಿತು ಮಹತ್ವದ ಮಾಹಿತಿಗಳನ್ನು ನೀಡಿ, ಅಧಿಕಾರವನ್ನು ಹಸ್ತಾಂತರಿಸಿದರು. ಅಗತ್ಯ ಕಡತಗಳಿಗೆ ಸಹಿ ಮಾಡುವ ಮೂಲಕ ದೀಪನ್ ಎಂ.ಎನ್. ಅಧಿಕೃತವಾಗಿ ತಮ್ಮ ಹೊಸ ಕರ್ತವ್ಯಕ್ಕೆ ಚಾಲನೆ ನೀಡಿದರು.ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ಎಂದು ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು .
ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡುವುದಾಗಿ ನುಡಿದರು. ಮಾಧ್ಯಮಗಳ ಸಹಕಾರವನ್ನು ಅವರು ಕೋರಿದರು. ಮೂಲತಃ ಬೆಂಗಳೂರಿನವನು ಎಂದು ಅವರು ಹೇಳಿಕೊಂಡರು .ಇದೇ ಸಂದರ್ಭದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಿಸಿ, ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಗೆ ವರ್ಗಾವಣೆ ಆದ ಎಸ್.ಪಿ. ನಾರಾಯಣ . ಎಂ. ಅವರಿಗೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಹೂಮಳೆಗರೆದು ಬೀಳ್ಕೊಟ್ಟರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 