ಭಾರತೀಯ ಸೇನೆಯ ಬುಮ್ಲಾ ಹೊರ ಠಾಣೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ಇಟಾನಗರ, ನವೆಂಬರ್ 15 : ಎರಡು ದಿನಗಳ ಅರುಣಾಚಲ ಪ್ರದೇಶ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಭಾರತ-ಚೀನಾ ಗಡಿಯ ತವಾಂಗ್ ಬಳಿಯ ಬುಮ್ಲಾದಲ್ಲಿರುವ ಭಾರತೀಯ ಸೇನೆಯ ಮುಂಚೂಣಿ ಠಾಣೆಗಳಿಗೆ ಭೇಟಿ ನೀಡಿದ್ದಾರೆ.
ಅರುಣಾಚಲ ಪ್ರದೇಶದ ತವಾಂಗ್ ಬಳಿಯ ಬುಮ್ಲಾದ ಮುಂಚೂಣಿ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಅಲ್ಲದೆ, ಭಾರತೀಯ ಸೈನ್ಯದ ಕೆಚ್ಚೆದೆಯ ಜವಾನರು ಮತ್ತು ಅಧಿಕಾರಿಗಳೊಂದಿಗೆ ಅದ್ಭುತ ಸಂವಾದ ನಡೆಸಲಾಗಿದೆ. ಸೇನೆಯು ಅತ್ಯಂತ ಸವಾಲಿನ ವಾತಾವರಣದಲ್ಲಿಯೂ ಭಾರತದ ಗಡಿಗಳನ್ನು ಭದ್ರಪಡಿಸುತ್ತಿದೆ ಎಂದು ರಕ್ಷಣಾ ಸಚಿವರು ಟ್ವೀಟ್ ಮಾಡಿದ್ದಾರೆ.
ನನ್ನ ಬುಮ್ಲಾ ಭೇಟಿಯ ಸಮಯದಲ್ಲಿ, ಗಡಿ ವಿಷಯದಲ್ಲಿ ಗ್ರಹಿಕೆಯ ವ್ಯತ್ಯಾಸಗಳ ಹೊರತಾಗಿಯೂ, ಭಾರತೀಯ ಸೇನೆ ಮತ್ತು ಪಿಎಲ್ಎ ಎರಡೂ ಎಲ್ಎಸಿಯ ಮೇಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಷ್ಟು ಸಂವೇದನಾಶೀಲವಾಗಿವೆ ಎಂದು ನಾನು ತಿಳಿದುಕೊಂಡಿದ್ದೇನೆ. ಎಲ್ಲಾ ಸಂದರ್ಭಗಳಲ್ಲಿಯೂ ಹೆಚ್ಚಿನ ಪ್ರಬುದ್ಧತೆಯನ್ನು ತೋರಿಸಿದ್ದಕ್ಕಾಗಿ ನಾನು ಭಾರತೀಯ ಸೇನೆಯನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಗುರುವಾರ, ತವಾಂಗ್ನಲ್ಲಿ ನಡೆದ 11 ನೇ ಮೈತ್ರೀ ದಿವಾಸ್ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 