ಜನನ-ಮರಣ ನೋಂದಣಿಯಲ್ಲಿ ವಿಳಂಬ ಸಹಿಸಲಾಗದು: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ
Delay in birth and death registration cannot be tolerated: Deputy Commissioner C.N. Sridhar issues s
ಗದಗ 17: ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮಯೋಚಿತವಾಗಿ ಹಾಗೂ ದೋಷರಹಿತವಾಗಿ ನಡೆಸುವುದು ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ಕಾರಣಕ್ಕೂ ವಿಳಂಬ ನೋಂದಣಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಜನನ-ಮರಣ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಗತಿ ಪರೀಶೀಲನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳ ಜನನ-ಮರಣ ನೋಂದಣಿ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಡಿಜಿಟಲ್ ಕೀ ಹೊಂದಿರಬೇಕು. ಈ ವಿಷಯದಲ್ಲಿ ಯಾವುದೇ ವಿನಾಯಿತಿ ಅಥವಾ ಕಾರಣಗಳನ್ನು ಒಪ್ಪಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 