ದ್ರಾಕ್ಷಿ ಬೆಳೆಗಾರರಿಗೆ ವಿಳಂಬವಾಗುತ್ತಿದ್ದ ವಿಮಾ ಹಣ ಪಾವತಿ ಮಾಡಲು ಆರಂಭ
Delayed insurance payments to grape growers begin
ವಿಜಯಪುರ 29: ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರಿಗೆ ವಿಳಂಬವಾಗುತ್ತಿದ್ದ ವಿಮಾ ಹಣವನ್ನು ಪಾವತಿ ಮಾಡಲು ಆರಂಭಿಸಿರುವ ಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ. ಕೆ.ಎಚ್. ಮುಂಬಾರೆಡ್ಡಿ ಸೇರಿದಂತೆ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಸರ್ಕಾರಕ್ಕೆ ಧನ್ಯವಾದ ಅರ್ಿಸಿರುವ ಸಂಘಟನೆಯ ಪದಾಧಿಕಾರಿಗಳು, ಅನೇಕ ಸಮಸ್ಯೆಗಳನ್ನು ಎದುರಿಸಿದ ದ್ರಾಕ್ಷಿ ಬೆಳೆಗಾರರಿಗೆ ವಿಮಾ ಹಣ ಸಕಾಲಕ್ಕೆ ಬಾರದೇ ದೊಡ್ಡ ತೊಂದರೆ ಸೃಜಿಸಿತ್ತು. ಆದರೆ ಈಗ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದ್ದು ವಿಮಾ ಹಣ ಪಾವತಿ ಆರಂಭವಾಗಿರುವುದು ಎಲ್ಲ ದ್ರಾಕ್ಷಿ ಬೆಳೆಗಾರರಿಗೂ ಸಂತೋಷ ತರಿಸಿದೆ,
ಈ ನಮ್ಮ ಹೋರಾಟ ಹಾಗೂ ನ್ಯಾಯಯುತವಾದ ಕೂಗಿಗೆ ಸ್ಪಂದಿಸಿದ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲರಿಗೆ, ಸಚಿವ ಶಿವಾನಂದ ಪಾಟೀಲರಿಗೆ ಹಾಗೂ ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ತೋಟಗಾರಿಕಾ ಇಲಾಖೆಯಯ ಅಧಿಕಾರಿಗಳಿಗೆ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳಾದ ಭೀಮಸೇನ ಕೋಕರೆ, ಎಚ್.ಆರ್. ಉಟಗಿ, ಎಸ್.ಎಸ್. ಛಾಯಾಗೋಳ, ವಾಮನ ಮಹಿಷಿ, ಎಂ.ಆರ್. ತುಂಗಳ, ಶ್ರೀಶೈಲಗೌಡ ಪಾಟೀಲ, ಉಮೇಶ ಮಲ್ಲಣ್ಣವರ, ಸುರೇಶಗೌಡ ಬಿರಾದಾರ, ಮಹಾವೀರ ಕುಸನಾಳ, ಅಶೋಕ ಬಾಲಗಾವಿ, ವಿಶ್ವನಾಥ ಚನಾಳ ಮೊದಲಾದವರು ಅಭಿನಂದನೆ ಸಲ್ಲಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 