೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓ ಎಸ್ ಡಿ
ನವದೆಹಲಿ, ಫೆ೭, ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಸಮೀಪಿಸುತ್ತಿರುವಂತೆಯೇ ದೆಹಲಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ. ಅಂಡಮಾನ್ ನಿಕೋಬಾರ್ ಡಿಯು ಡಮನ್ ನಾಗರೀಕ ಸೇವೆಗಳಿಗೆ ಸೇರಿದ ಆಧಿಕಾರಿಯಾಗಿರುವ ಆರೋಪಿ ಗೋಪಾಲಕೃಷ್ಣ ಮಾಧವ್, ಒಬ್ಬ ವ್ಯಕ್ತಿಯಿಂದ ೨ ಲಕ್ಷರೂಪಾಯಿ ಪಡೆದುಕೊಳ್ಳುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಆರೋಪಿಯನ್ನು ಸಿಬಿಐ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಪಾತ್ರ ಇದೆಯೇ ಎಂಬುದನ್ನು ಸಿಬಿಐ ಅಧಿಕಾರಿಗಳು ವಿಚಾರಿಸುತ್ತಿದ್ದಾರೆ. ೨೦೧೫ ರಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಓ ಎಸ್ ಡಿ ಯಾಗಿ ನೇಮಕಗೊಂಡಿದ್ದ ಗೋಪಾಲಕೃಷ್ಣ ಅವರನ್ನು ಚುನಾವಣೆಯ ಸಂದರ್ಭದಲ್ಲಿ ಬಂಧಿಸಿರುವುದು ತೀವ್ರ ಚರ್ಚೆಯ ವಿಷಯವಾಗಿದೆ. ಮನೀಶ್ ಸಿಸೋಡಿಯಾ ವಿರುದ್ದ ಜಾಮಿಯಾ ಮಿಲಿಯಾ ಬಳಿ ಬಸ್ಸಿಗೆ ಬೆಂಕಿ ಹಚ್ಚಿದ್ದ ಪ್ರಕರಣವನ್ನು ಈ ಮೊದಲು ದೆಹಲಿ ಪೊಲೀಸರು ದಾಖಲಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 