೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓ ಎಸ್ ಡಿ
ನವದೆಹಲಿ, ಫೆ೭, ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಸಮೀಪಿಸುತ್ತಿರುವಂತೆಯೇ ದೆಹಲಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ. ಅಂಡಮಾನ್ ನಿಕೋಬಾರ್ ಡಿಯು ಡಮನ್ ನಾಗರೀಕ ಸೇವೆಗಳಿಗೆ ಸೇರಿದ ಆಧಿಕಾರಿಯಾಗಿರುವ ಆರೋಪಿ ಗೋಪಾಲಕೃಷ್ಣ ಮಾಧವ್, ಒಬ್ಬ ವ್ಯಕ್ತಿಯಿಂದ ೨ ಲಕ್ಷರೂಪಾಯಿ ಪಡೆದುಕೊಳ್ಳುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಆರೋಪಿಯನ್ನು ಸಿಬಿಐ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಪಾತ್ರ ಇದೆಯೇ ಎಂಬುದನ್ನು ಸಿಬಿಐ ಅಧಿಕಾರಿಗಳು ವಿಚಾರಿಸುತ್ತಿದ್ದಾರೆ. ೨೦೧೫ ರಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಓ ಎಸ್ ಡಿ ಯಾಗಿ ನೇಮಕಗೊಂಡಿದ್ದ ಗೋಪಾಲಕೃಷ್ಣ ಅವರನ್ನು ಚುನಾವಣೆಯ ಸಂದರ್ಭದಲ್ಲಿ ಬಂಧಿಸಿರುವುದು ತೀವ್ರ ಚರ್ಚೆಯ ವಿಷಯವಾಗಿದೆ. ಮನೀಶ್ ಸಿಸೋಡಿಯಾ ವಿರುದ್ದ ಜಾಮಿಯಾ ಮಿಲಿಯಾ ಬಳಿ ಬಸ್ಸಿಗೆ ಬೆಂಕಿ ಹಚ್ಚಿದ್ದ ಪ್ರಕರಣವನ್ನು ಈ ಮೊದಲು ದೆಹಲಿ ಪೊಲೀಸರು ದಾಖಲಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 