ದೆಹಲಿ ಹಿಂಸಾಚಾರ: 123 ಎಫ್ಐಆರ್ನಲ್ಲಿ ಬಿಜೆಪಿಯವರ ಹೆಸರಿಲ್ಲ- ಕಾಂಗ್ರೆಸ್
ಬೆಂಗಳೂರು, ಫೆ.29 : ದೆಹಲಿ ಗಲಭೆಯಲ್ಲಿ ಅಲ್ಲಿನ ಪೊಲೀಸರು 123 ಎಫ್ಐಆರ್ ದಾಖಲಿಸಿದ್ದಾರೆ. ವಿಪರ್ಯಾಸವೆಂದರೆ ಅವುಗಳಲ್ಲಿ ಯಾವುದೂ ಬಿಜೆಪಿಯವರ ಹೆಸರು ಒಳಗೊಂಡಿಲ್ಲ. ಪ್ರಚೋದನಕಾರಿ ಭಾಷಣ ಮಾಡಿದ ನಾಯಕರ ಹೆಸರೇ ಅದರಲ್ಲಿಲ್ಲ. ಅವರ ದ್ವೇಷದ ಭಾಷಣದಿಂದ ಗಲಭೆಗಳನ್ನು ಪ್ರಚೋದಿಸಿದ ಕೆ.ಮಿಶ್ರಾ ಮತ್ತು ಠಾಕೂರ್ ಅವರ ಹೆಸರೂ ಇಲ್ಲ. ಇದು ನಿಷ್ಪಕ್ಷಪಾತವೇ? ದೆಹಲಿ ಪೊಲೀಸರು ಯಾರಿಗಾಗಿ ಕೆಲಸ ಮಾಡುತ್ತಿದ್ದಾರೆ? ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಗುಜರಾತ್ ಮಾದರಿಯ ಆಡಳಿತದ ನೈಜ ಸತ್ಯ ಒಂದೊಂದೇ ಹೊರಬರುತ್ತಿದೆ. ಗುಜರಾತ್ನಲ್ಲಿ 3.8 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಇದು ಜುಲೈ 19 ರಿಂದ 2.41ಲಕ್ಷಕ್ಕಿಂತ ಹೆಚ್ಚಿನ ಏರಿಕೆ ಸೂಚಿಸುತ್ತದೆ. ದೇಶದಲ್ಲಿ ಆರೋಗ್ಯ ಪರಿಸ್ಥಿತಿ ಸುಧಾರಣೆಯಾಗಿದೆ ಎಂದು ಬಿಜೆಪಿ ಹೇಳುತ್ತಿರುವ ಹೊರತಾಯಿಯೂ,ದೇಶ ಇಂತಹ ಪರಿಸ್ಥಿತಿಯಲ್ಲಿದೆ ಎಂದು ಟೀಕಿಸಿದೆ.
ನಿಮಗಿದು ತಿಳಿದಿರಲಿ, 'ಭಾರತ್ ನಿರ್ಮಾಣ ಯೋಜನೆ' ಗ್ರಾಮೀಣ ಮಟ್ಟದಲ್ಲಿ ಮೂಲ ಸೌಕರ್ಯ, ಕುಡಿಯುವ ನೀರು, ವಿದ್ಯುತ್ ಮತ್ತು ಇನ್ನಿತರೆ ಸೌಲಭ್ಯಗಳ್ನು ಕಲ್ಪಿಸಿ ಗ್ರಾಮೀಣ ಭಾರತವನ್ನು ಸದೃಢವಾಗಿ ರೂಪಿಸಲು 2005ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು 'ಭಾರತ ನಿರ್ಮಾಣ ಯೋಜನೆ'ಯನ್ನು ಜಾರಿಗೊಳಿಸಿದರು. ಇದು ದೇಶಕ್ಕೆ ಕಾಂಗ್ರೆಸ್ನ ಕೊಡುಗೆಯಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 