ಯುಎಸ್ ಸಿಐಆರ್ ಎಫ್ ನಿಂದ ದೆಹಲಿ ಹಿಂಸಾಚಾರ ಖಂಡನೆ
ವಾಷಿಂಗ್ಟನ್, ಫೆ 27; ದೆಹಲಿಯಲ್ಲಿ ನಡೆದ ಹಿಂಸಾಚಾರಗಳ ಬಗ್ಗೆ ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ(ಯುಎಸ್ ಸಿಐಆರ್ ಎಫ್) ತೀವ್ರ ಕಳವಳ ವ್ಯಕ್ತಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯ ನಡುವೆಯೇ ಈಶಾನ್ಯ ದೆಹಲಿಯಲ್ಲಿ ಮಾರಕ ಗಲಭೆಗಳು ಮತ್ತು ಹಿಂಸಾಚಾರಗಳು ನಡೆದಿವೆ. ಈವರೆಗೆ, ಹಿಂಸಾಚಾರದಲ್ಲಿ 27 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ವರದಿಗಳಂತೆ ಅನೇಕ ಪ್ರಾರ್ಥನಾ ಸ್ಥಳಗಳು ಮತ್ತು ಮಂದಿರಗಳನ್ನೂ ಧ್ವಂಸಗೊಳಿಸಲಾಗಿದೆ. 2019 ರ ಡಿಸೆಂಬರ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ವ್ಯಾಪಕ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಉಂಟಾಗಿದೆ.
‘ದೆಹಲಿಯಾದ್ಯಂತ ಹೆಚ್ಚುತ್ತಿರುವ ಹಿಂಸಾಚಾರ ಮುಂದುವರಿಯಬಾರದು.’ ಎಂದು ಯುಎಸ್ ಸಿಐಆರ್ ಎಫ್ ಆಯುಕ್ತರಾದ ಅನುರಿಮಾ ಭಾರ್ಗವ ಹೇಳಿದ್ದಾರೆ.
‘ಭಾರತ ಸರ್ಕಾರ ತನ್ನ ಎಲ್ಲ ನಾಗರಿಕರ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಲು ತ್ವರಿತ ಕ್ರಮ ತೆಗೆದುಕೊಳ್ಳಬೇಕು.’ ಎಂದು ಅವರು ಹೇಳಿದ್ದಾರೆ.
2019 ರ ವಾರ್ಷಿಕ ವರದಿಯಲ್ಲಿ ಯುಎಸ್ ಸಿಐಆರ್ ಎಫ್ ಭಾರತವನ್ನು ಎರಡನೇ ಸ್ತರದ ದೇಶವೆಂದು ವರ್ಗೀಕರಿಸಿದೆ. ಅಂತಾರಾಷ್ಟ್ರೀಯ ಧಾರ್ಮಿಕ ಕಾಯ್ದೆಯಡಿ ನಿರ್ದಿಷ್ಟ ದೇಶವೊಂದರಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆಗಳ ಅಂಶಗಳನ್ನು ವರದಿ ಪರಿಗಣಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 