ದೆಹಲಿ ಮಾಲಿನ್ಯ : ಶಾಲೆಗಳು ನ 15 ರವರೆಗೆ ಬಂದ್
ನವದೆಹಲಿ, ನ 14 : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಶಾಲೆಗಳಿಗೆ ಗುರುವಾರ ಮತ್ತು ಶುಕ್ರವಾರ ರಜೆ ಘೋಷಿಸಲಾಗಿದೆ.
ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿದೆ ಎಂದು ಪರಿಸರ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಪ್ರಾಧಿಕಾರ ತಿಳಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕಟ್ಟಡ ನಿರ್ಣಾಣದಲ್ಲಿನ ಉಪಯೋಗಿಸುವ ಯಂತ್ರಗಳ ಬಳಕೆಗೂ ನ 15 ರವರೆಗೆ ನಿಷೇಧ ಹೇರಲಾಗಿದೆ.
ಫರಿದಾಬಾದ್, ಗುರುಗ್ರಾಮ್, ಗಜಿಯಾಬಾದ್, ನೋಯ್ಡಾ, ಬಹದುರ್ಗಾ, ಭಿವಾಡಿ, ಸೋನೆಪಟ್, ಪಾಣಿಪತ್ ಗಳಲ್ಲಿನ ಎಲ್ಲಾ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲ ಬಳಸದ ಇತರ ಇಂಧನ ಆಧಾರಿತ ಕೈಗಾರಿಕೆಗಳೂ ಶುಕ್ರವಾರದವರೆಗೆ ಮುಚ್ಚಿರಲಿವೆ.
ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರುತ್ತಿದ್ದು ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ನೆರೆ ರಾಜ್ಯಗಳ ಉಳಿಕೆ ಸುಡುವಿಕೆ ಕೂಡ ದೆಹಲಿ ಮೇಲೆ ಪರಿಣಾಮ ಬೀರಿದೆ. ಸಮ - ಬೆಸ ಕ್ರಮದನ್ವಯ ವಾಹನಗಳ ಸಂಚಾರಕ್ಕೆ ಮಿತಿಯೊಡ್ಡಲಾಗಿದೆ. ಆದಾಗ್ಯೂ ದೆಹಲಿಯಲ್ಲಿ ವಾಯುಗುಣಮಟ್ಟ ಹತೋಟಿಗೆ ಬಂದಿಲ್ಲ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 