ನಾಳೆಯಿಂದ ಮನೆಗಳಿಗೆ ಮಾವಿನ ಹಣ್ಣು ಪೂರೈಕೆ: ಅಂಚೆ ಇಲಾಖೆಯಿಂದ ವಿನೂತನ ಸೇವೆ..!!!
ಬೆಂಗಳೂರು, ಏ 17, ರೈತರು ಬೆಳೆದ ತಾಜಾ ಮಾವಿನ ಹಣ್ಣುಗಳನ್ನು ಮನೆ ಮನೆಗೆ ತಲುಪಿಸಲು ಅಂಚೆ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಮಾಡಿರುವ ಲಾಕ್ ಸೌನ್ ಸಂದರ್ಭದಲ್ಲಿ ಅಂಚೆ ಇಲಾಖೆ ರೈತರ ನೆರವಿಗೆ ಧಾವಿಸಿದೆ. ನಾಳೆಯಿಂದ ಬೆಂಗಳೂರಿನ ನಾಗರೀಕರಿಗೆ ಮನೆ ಬಾಗಿಲಿಗೆ ಬಾಯಲ್ಲಿ ನೀರೂರಿಸುವ ಹಣ್ಣುಗಳ ರಾಜಾ ಮಾವಿನ ಹಣ್ಣುಗಳ ವಿತರಣೆ ಸೇವೆ ಆರಂಭವಾಗಲಿದೆ. ನೇರವಾಗಿ ರೈತರಿಂದ ಗ್ರಾಹಕರ ಮನೆಗೆ ಮಾವಿನ ಹಣ್ಣಿನ ಪೂರೈಕೆಗೆ ಅಂಚೆ ಇಲಾಖೆ ಸಜ್ಜಾಗಿದೆ. ಈ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಗ್ರಾಹಕರಿಗೂ ಅನುಕೂಲ ಮಾಡಿಕೊಡುವ ಜತೆಗೆ ರೈತರನ್ನು ಉಳಿಸುವ ಮಾನವೀಯ ಸೇವೆಗೆ ಅಂಚೆ ಇಲಾಖೆ ಸಜ್ಜಾಗಿದೆ. ಇಂದು ಮದ್ಯಾಹ್ನದಿಂದ ಅಂಚೆ ಮಿತ್ರ ಅಪ್ ಮೂಲಕ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಎಲ್ಲರೂ ಈ ಸೌಲಭ್ಯ ಉಪಯೋಗಿಸಬೇಕು. ರೈತರಿಗೆ ನೇರವಾಗುವ ದ್ಯೇಯ ನಮ್ಮದಾಗಿದೆ ಎಂದು ಎಂದು ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 