ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಆಗ್ರಹ: ನಾಳೆ ಬಳ್ಳಾರಿ ಜಿಲ್ಲಾ ಬಂದ್
Demand for fulfillment of demands of liquor land victims: Bellary district bandh tomorrow
ಬಳ್ಳಾರಿ 17: ಕುಡಿತಿನಿ ಪ್ರದೇಶದ ಏಳು ಗ್ರಾಮಗಳ ರೈತರಿಂದ ಕೈಗಾರಿಕೆಗಳ ಸ್ಥಾಪನೆ ಹೆಸರಿನಲ್ಲಿ ಸ್ವಾಧೀನಪಡಿಸಿಕೊಂಡ 12,875.09 ಎಕರೆ ಭೂಮಿಗೆ ನ್ಯಾಯಯುತ ಭೂಬೆಲೆ ನಿಗದಿಪಡಿಸದೆ ವಂಚನೆ ಮಾಡಲಾಗಿದೆ ಹಾಗೂ 16 ವರ್ಷಗಳು ಕಳೆದರೂ ಉದ್ದೇಶಿತ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಟಿ ಮಾಡದ ಹಿನ್ನೆಲೆಯಲ್ಲಿ ಜೂನ್ 18ರಂದು ಬಳ್ಳಾರಿ ಜಿಲ್ಲಾ ಸಂಪೂರ್ಣ ಬಂದ್ ಸ್ವರೂಪದ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ಕುಡಿತಿನಿ ಪ್ರದೇಶದ ಭೂ ಸಂತ್ರಸ್ತರ ಹೋರಾಟ ಸಮಿತಿ ತಿಳಿಸಿದೆ.ಬುಧವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಹೋರಾಟ ಸಮಿತಿಯ ಮುಖಂಡರು, ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬಂದ್ ನಡೆಸಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 