ಕಬ್ಬಿನ ದರ ಏರಿಕೆ ಬೆನ್ನಲ್ಲೇ ರೈತರಿಗೆ ಎರಡನೇ ಬಿಲ್ ನೀಡಲು ಆಗ್ರಹ
Demand for payment of second bill to farmers following hike in sugarcane prices
ಸಂಬರಗಿ 26: ಕಬ್ಬಿನ ಸಕ್ಕರೆ ದರ ಕೆಜಿಗೆ ರೂ70ರಿಂದ ರೂ75ಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಸಕ್ಕರೆ ಕಾರ್ಖಾನೆಗಳು ಎರಡನೇ ಬಿಲ್ ಘೋಷಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಗಣಪತಿ ಹಬ್ಬಕ್ಕೂ ಮುನ್ನವೇ ರೈತರಿಗೆ ಎರಡನೇ ಬಿಲ್ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅಥಣಿ ತಾಲ್ಲೂಕಿನಲ್ಲಿ ಸುಮಾರು 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು, ಸಕ್ಕರೆ ದರ ಏರಿಕೆಯಾಗಿದ್ದರೂ ರೈತರಿಗೆ ಅದರ ಲಾಭ ಸಮರ್ಕವಾಗಿ ದೊರೆಯುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ. ಈ ಬಾರಿ ಎರಡನೇ ಬಿಲ್ ರೂ500 ಆಗಿರಬೇಕು ಹಾಗೂ 2026-27ನೇ ಸಾಲಿನ ಕಬ್ಬಿಗೆ ಪ್ರತಿ ಟನ್ಗೆ ರೂ5,000 ನಿವ್ವಳ ದರ ನೀಡಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಹಾದೇವ ಮಡಿವಾಳ ಆಗ್ರಹಿಸಿದ್ದಾರೆ. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ರೈತ ಸಂಘದ ವತಿಯಿಂದ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 