ರಾಯಬಾಗದ ಬಾಕಿ ಕೆಲಸಗಳಿಗೆ ಅಧಿವೇಶನದಲ್ಲಿ ಒತ್ತಾಯ: ಶಾಸಕ ಐಹೊಳೆ
Demand for pending works of the Royal Palace in the session: MLA Aihole
ಚಿಕ್ಕೋಡಿ, 20 : ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರಾಯಬಾಗ ಕ್ಷೇತ್ರದ ನೆನೆಗುದಿಗೆ ಬಿದ್ದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಸ್ತಾಪ ಮಾಡಲಾಗುತ್ತದೆ ಎಂದು ಶಾಸಕ ದುರ್ಯೋಧನ ಐಹೊಳೆ ತಿಳಿಸಿದ್ದಾರೆ. ತಾಲೂಕಿನ ಜೈನಾಪೂರ ಮತ್ತು ಹತ್ತರವಾಟ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳ ಕುರಿತುರಾಯಬಾಗ ಕ್ಷೇತ್ರದ ಬಾಕಿ ಉಳಿದಿರುವ ಯೋಜನೆಗಳನ್ನು ಅಧಿವೇಶನದಲ್ಲಿ ಗಟ್ಟಿ ಧ್ವನಿಯಲ್ಲಿ ಒತ್ತಾಯಿಸಿ, ಅವುಗಳಿಗೆ ಅಗತ್ಯ ಅನುದಾನ ಮತ್ತು ಅನುಮೋದನೆ ತಂದು ಕೊಡಲಾಗುತ್ತದೆ” ಎಂದು ಭರವಸೆ ನೀಡಿದರು.
ರಾಯಬಾಗ ಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಪರಿಶಿಷ್ಟ ಕಾಲೋನಿಯಲ್ಲಿ ಕುಡಿಯುವ ನೀರು ಸರಬರಾಜು ಹಾಗೂ ಸ್ಮಶಾನಕ್ಕೆ ರಸ್ತೆ ನಿರ್ಮಾಣಕ್ಕಾಗಿ ?30 ಲಕ್ಷ ಅನುದಾನ ಮಂಜೂರಾಗಿದೆ ಎಂದು ಹೇಳಿದರು.ಅದೇ ರೀತಿ ಜೈನಾಪೂರಹಿಹತ್ತರವಾಟ ಕೂಡು ರಸ್ತೆಗೆ ?40 ಲಕ್ಷ ಅನುದಾನ ಹಾಗೂ ಮಜಲಟ್ಟಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ?20 ಲಕ್ಷ ಅನುದಾನ ಮಂಜೂರಾಗಿದೆ ಎಂದು ಅವರು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಹೆಸ್ಕಾಂ ಮಾಜಿ ನಿರ್ದೇಶಕ ಮಹೇಶ್ ಭಾತೆ, ವಿಜಯ ಕೊಠಿವಾಲೆ, ರಾಜು ಹರಗನ್ನವರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 