ಮಾನ್ಯ ಪಾಟೀಲ್ ಕೊಲೆಗಡುಕರಿಗೆ ಉಗ್ರ ಶಿಕ್ಷೆಗೆ ಗುರುಪಡಿಸಲು ಒತ್ತಾಯ
Demand for severe punishment for the murderers of Honorable Patil
ಗಂಗಾವತಿ 30 : ಹುಬ್ಬಳ್ಳಿಯ ಇನಾಮ ವೀರಾಪುರ ಗ್ರಾಮದ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಾನ್ಯ ಪಾಟೀಲ್ ಎನ್ನುವ ಯುವತಿಯನ್ನು ಆಕೆಯ ಕುಟುಂಬಸ್ಥರೆ ಕೊಲೆ ಮಾಡಿದ್ದು ನಾಗರೀಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದ್ದು, ಕೂಡಲೆ ಕೊಲೆಗೆಡುಕರನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಅಖಿಲ ಭಾರತ ಮಾದಿಗ ದಂಡೋರಾ ಗಂಗವತಿ ತಾಲೂಕಾ ಸಮಿತಿ ಗಂಗವತಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ದಲಿತ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು, ಯುವಕ ವಿವೇಕಾನಂದ ಇವರಿಗೆ ಸರಕಾರಿ ಉದ್ಯೋಗ ನೀಡಬೇಕು, ನ್ಯಾಯಯುತ ಪರಿಹಾರ ಸರಕಾರ ನೀಡಬೇಕು, ಕೊಲೆಗೆಡುಕು ಪ್ರಕಾಶ್ ಪಾಟೀಲ್ ಇತರರಿಗೆ ಕಠಿಣ ಶಿಕ್ಷೆ ನೀಡಬೇಕು, ರಾಜ್ಯದಾದ್ಯಂತ ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕನಕಪ್ಪ ದೊಡ್ಡಮನಿ, ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಶಿವಪ್ಪ ಸಿದ್ದಾಪುರ, ಪದಾಧಿಕಾರಿಗಳಾದ ಗುಂಡಪ್ಪ ನೀಲೋಗಲ್, ಯಮನೂರ್ಪ ಗೋನಾಳ, ರಮೇಶ್ ಢಣಾಪುರ ಹಾಗು ಯಮನೂರ್ಪ ಚುಕ್ಕಾಡಿ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 