ಪಾಕಿಸ್ತಾನ ಜಿಂದಾಬಾದ್ ಕೂಗಿದ ದೇಶದ್ರೋಹಿಯನ್ನು ಬಂಧಿಸಲು ಆಗ್ರಹ

ಗಂಗಾವತಿ.ಫೆ.29: ಮಂಗಳವಾರದಂದು ಕರ್ನಾಟಕದ ವಿಧಾನಸೌಧದಲ್ಲಿ ನಡೆದ ರಾಜ್ಯ ಸಭೆಯ ಚುನಾವಣೆಯ ಫಲಿತಾಂಶದ ನಂತರ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾದ ನಾಸೀರ ಹುಸೇನ್ ರವರ ಪರವಾಗಿ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಮೂಲಕ ದೇಶದ್ರೋಹವೆಸಗಿರುವುದು ತೀವ್ರ ಖಂಡನೀಯ ಎಂದು ದಲಿತ ಸಂಘಟನಾ ಸಮಿತಿ ಕೊಪ್ಪಳ ಜಿಲ್ಲಾಧ್ಯಕ್ಷ ಅಜಯಕುಮಾರ ಛಲವಾದಿ ಆಕ್ರೋಶ ವ್ಯಕ್ತಪಡಿಸಿದರು. 

ಕರ್ನಾಟಕ ವಿಧಾನಸೌಧದಲ್ಲಿ ನಾಸೀರ್ ಹುಸೇನ್ರವರ ಗೆಲುವಿನ ಸಂದರ್ಭದಲ್ಲಿ ಭಾರತದ ಕಟ್ಟಾ ವೈರಿ ರಾಷ್ಟ್ರವಾದ ಪಾಕಿಸ್ತಾನದ ಪರವಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರು ವುದು ದೇಶದ್ರೋಹದ ಮನ ಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ಸರ್ಕಾರ ಘೋಷಣೆ ಕೂಗಿದವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ಕೊಡಬೇಕು ಎಂದು ಕೊಪ್ಪಳ ಜಿಲ್ಲಾಧ್ಯಕ್ಷ ಅಜಯಕುಮಾರ ಛಲವಾದಿ ಆಗ್ರಹ